ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

Published : Oct 16, 2019, 04:00 PM IST

ಅಯೋಧ್ಯೆ ಕೊನೆ ದಿನದ ವಿಚಾರಣೆ ವೇಳೆ ಹೈಡ್ರಾಮಾ| ಸಿಜೆಐ ಮುಂದೆಯೇ ಪುಸ್ತಕ ಹರಿದು ಹಾಕಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ| ಹಿಂದೂ ಮಹಾಸಭಾ ಪರ ವಕೀಲ ಪ್ರದರ್ಶಿಸಿದ ಪುಸ್ತಕ| ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ಅಯೋಧ್ಯೆ ರಿವಿಸಿಟೆಡ್ ಪುಸ್ತಕ ಹರಿದ ರಾಜೀವ್ ಧವನ್| ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಜೆಐ ರಂಜನ್ ಗೊಗೋಯ್| ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಎಚ್ಚರಿಕೆ ನೀಡಿದ ಗೊಗೊಯ್| ತಮ್ಮ ವರ್ತನೆಗೆ ನ್ಯಾಯಾಲಯದ ಕ್ಷಮೆ ಕೇಳಿದ ರಾಜೀವ್ ಧವನ್|

ಅಯೋಧ್ಯೆಯ ರಾಮಜನ್ಮಭೂಮಿ -ಬಾಬ್ರಿಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್'ನಲ್ಲಿ ನಡೆಯುತ್ತಿರುವ ವಿಚಾರಣೆಯ ಅಂತಿಮ ದಿನ ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ.

ತಮ್ಮ ವಾದಗಳಿಗೆ ಬೆಂಬಲವಾಗಿ ಹಿಂದೂ ಮಹಾ ಸಭಾ ವಕೀಲರು  ನ್ಯಾಯಾಲಯದಲ್ಲಿ  ಪ್ರದರ್ಶಿಸಿದ ಪುಸ್ತಕ  ಹಾಗೂ ನಕ್ಷೆ  ತೀವ್ರ ವಿವಾದ ಸೃಷ್ಟಿಸಿದ್ದು, ಈ ಪುಸ್ತಕವನ್ನು ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ಹರಿದು ಹಾಕಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ರಿವಿಸಿಟೆಡ್ ಎಂಬ ಹೆಸರಿನ  ಪುಸ್ತಕವನ್ನು ಹಿಂದೂ ಮಹಾಸಭಾ ವಕೀಲ ವಿಕಾಸ್ ಸಿಂಗ್ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುನ್ನಿ ವಕ್ಫ್ ಮಂಡಳಿಯ ವಕೀಲ ರಾಜೀವ್ ಧವನ್, ಪುಸ್ತಕ ಹಾಗೂ ನಕ್ಷೆಯನ್ನು ಹರಿದುಹಾಕಿದರು.

ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪದ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಈ ರೀತಿಯ ವರ್ತನೆ ಒಪ್ಪಲು ಸುತಾರಾಂ ಸಾಧ್ಯವಿಲ್ಲ ಎಂದು ಖಡ್ ಎಚ್ಚರಿಕೆ ನೀಡಿದರು. ಅಲ್ಲದೇ ತಾವು ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಬೆದರಿಕೆಯೊಡ್ಡಿದರು.

ಸಿಜೆಐ ಎಚ್ಚರಿಕೆಗೆ ಬೆದರಿದ ರಾಜೀವ್ ಧವನ್, ತಮ್ಮ ವರ್ತನೆಗೆ ಕ್ಷಮೆ ಕೋರಿದರಲ್ಲದೇ ವಿಚಾರಣಾ ಪ್ರಕ್ರಿಯೆ ಮೇಲೆ ತಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಪ್ರಕರಣದ ಪ್ರತಿದಿನದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಅಂತ್ಯವಾಗಲಿದ್ದು, ಇದೇ ನವೆಂಬರ್ 4 ಅಥವಾ 5 ರಂದು ತೀರ್ಪು ಹೊರಬೀಳಲಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ಶೀಘ್ರ ಇತ್ಯರ್ಥದ ಆಶಾವಾದ ಮೂಡಿಸಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್