ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

Published : Oct 16, 2019, 04:00 PM IST

ಅಯೋಧ್ಯೆ ಕೊನೆ ದಿನದ ವಿಚಾರಣೆ ವೇಳೆ ಹೈಡ್ರಾಮಾ| ಸಿಜೆಐ ಮುಂದೆಯೇ ಪುಸ್ತಕ ಹರಿದು ಹಾಕಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ| ಹಿಂದೂ ಮಹಾಸಭಾ ಪರ ವಕೀಲ ಪ್ರದರ್ಶಿಸಿದ ಪುಸ್ತಕ| ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ಅಯೋಧ್ಯೆ ರಿವಿಸಿಟೆಡ್ ಪುಸ್ತಕ ಹರಿದ ರಾಜೀವ್ ಧವನ್| ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಜೆಐ ರಂಜನ್ ಗೊಗೋಯ್| ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಎಚ್ಚರಿಕೆ ನೀಡಿದ ಗೊಗೊಯ್| ತಮ್ಮ ವರ್ತನೆಗೆ ನ್ಯಾಯಾಲಯದ ಕ್ಷಮೆ ಕೇಳಿದ ರಾಜೀವ್ ಧವನ್|

ಅಯೋಧ್ಯೆಯ ರಾಮಜನ್ಮಭೂಮಿ -ಬಾಬ್ರಿಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್'ನಲ್ಲಿ ನಡೆಯುತ್ತಿರುವ ವಿಚಾರಣೆಯ ಅಂತಿಮ ದಿನ ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ.

ತಮ್ಮ ವಾದಗಳಿಗೆ ಬೆಂಬಲವಾಗಿ ಹಿಂದೂ ಮಹಾ ಸಭಾ ವಕೀಲರು  ನ್ಯಾಯಾಲಯದಲ್ಲಿ  ಪ್ರದರ್ಶಿಸಿದ ಪುಸ್ತಕ  ಹಾಗೂ ನಕ್ಷೆ  ತೀವ್ರ ವಿವಾದ ಸೃಷ್ಟಿಸಿದ್ದು, ಈ ಪುಸ್ತಕವನ್ನು ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ಹರಿದು ಹಾಕಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ  ಕಿಶೋರ್ ಬರೆದಿರುವ ರಿವಿಸಿಟೆಡ್ ಎಂಬ ಹೆಸರಿನ  ಪುಸ್ತಕವನ್ನು ಹಿಂದೂ ಮಹಾಸಭಾ ವಕೀಲ ವಿಕಾಸ್ ಸಿಂಗ್ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುನ್ನಿ ವಕ್ಫ್ ಮಂಡಳಿಯ ವಕೀಲ ರಾಜೀವ್ ಧವನ್, ಪುಸ್ತಕ ಹಾಗೂ ನಕ್ಷೆಯನ್ನು ಹರಿದುಹಾಕಿದರು.

ರಾಜೀವ್ ಧವನ್ ವರ್ತನೆಗೆ ತೀವ್ರ ಆಕ್ಷೇಪದ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಈ ರೀತಿಯ ವರ್ತನೆ ಒಪ್ಪಲು ಸುತಾರಾಂ ಸಾಧ್ಯವಿಲ್ಲ ಎಂದು ಖಡ್ ಎಚ್ಚರಿಕೆ ನೀಡಿದರು. ಅಲ್ಲದೇ ತಾವು ನ್ಯಾಯಪೀಠದಿಂದ ಎದ್ದು ಹೊರನಡೆಯುವುದಾಗಿ ಬೆದರಿಕೆಯೊಡ್ಡಿದರು.

ಸಿಜೆಐ ಎಚ್ಚರಿಕೆಗೆ ಬೆದರಿದ ರಾಜೀವ್ ಧವನ್, ತಮ್ಮ ವರ್ತನೆಗೆ ಕ್ಷಮೆ ಕೋರಿದರಲ್ಲದೇ ವಿಚಾರಣಾ ಪ್ರಕ್ರಿಯೆ ಮೇಲೆ ತಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಪ್ರಕರಣದ ಪ್ರತಿದಿನದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಅಂತ್ಯವಾಗಲಿದ್ದು, ಇದೇ ನವೆಂಬರ್ 4 ಅಥವಾ 5 ರಂದು ತೀರ್ಪು ಹೊರಬೀಳಲಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ಶೀಘ್ರ ಇತ್ಯರ್ಥದ ಆಶಾವಾದ ಮೂಡಿಸಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!