Apr 21, 2019, 1:21 PM IST
ಕ್ರಿಕೆಟ್ ಬ್ಯಾಟ್ ಹಿಡಿದು ರಾಜಕುಮಾರಿ ತ್ರಿಷಿಕಾ ಕುಮಾರಿ ಸಿಂಗ್ ಫೀಲ್ಡಿಗಿಳಿದಿದ್ದಾರೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನೆನಪಿನಾರ್ಥ ಅರಸು ಮಂಡಳಿ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಯದುವೀರ್ ಪತ್ನಿ ತ್ರಿಷಿಕಾ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು. ಮಾನಸಗಂಗೋತ್ರಿ ಕಾಫಿ ಬೋರ್ಡ್ ನ ಮೈದಾನದಲ್ಲಿ ಕ್ರಿಕೆಟ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು 12 ತಂಡಗಳು ಪಂದ್ಯದಲ್ಲಿ ಭಾಗವಹಿಸಲಿವೆ.