ಲಿಂಗಾಯತರ ಕಡೆಗಣನೆ ಕಾಂಗ್ರೆಸ್ ಸೋಲಿಗೆ ಕಾರಣ! ಕೈ ಶಾಸಕ ಆಕ್ರೋಶ

May 25, 2019, 8:28 PM IST

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕಾಂಗ್ರೆಸ್ ಶಾಸಕರು ನಾಯಕರ ಕಡೆ ಬೊಟ್ಟು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಬೆನ್ನಲ್ಲೇ, ಹೀರೆಕೆರೂರು ಶಾಸಕ ಬಿ.ಸಿ. ಪಾಟೀಲ್ ಪಕ್ಷದ ಮುಖಂಡರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಲಿಂಗಾಯತ ಸಮುದಾಯವನ್ನು ಕಡೆಗಣಿಸಿದ್ದೇ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಎಂದು ಬಿ.ಸಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.