ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ : ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

Sep 29, 2019, 5:40 PM IST

ಬೆಂಗಳೂರು, [ಸೆ.29): ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!