Oct 4, 2019, 12:01 PM IST
ಬೆಂಗಳೂರು (ಅ.04): ರಾಜ್ಯ ಬೊಕ್ಕಸ ಖಾಲಿಯಾಗಿದೆ, ನೆರೆ ಪರಿಹಾರ ಕೊಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಗುರುವಾರ ನೆರೆಹಾನಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ತೆರಳಿದ್ದರು.
ನೆರೆ ಹಾನಿ ಬಗ್ಗೆ ಬೆಳಗಾವಿಯ ಜಿಪಂ ಸಭಾಗಂಣದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಖಜಾನೆ ಖಾಲಿ ವಿಚಾರವನ್ನು ಬಹಿರಂಗಪಡಿಸಿದ್ದರು.
ಇನ್ನೊಂದು ಕಡೆ, ನೆರೆ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಈ ವಿಚಾರವಾಗಿ ಬಿಜೆಪಿಯಲ್ಲೇ ಅಪಸ್ವರ ಕೇಳಿ ಬಂದಿದೆ. ಒಟ್ಟಾರೆಯಾಗಿ ಯಡಿಯೂರಪ್ಪ ಮಾತ್ರ ಪೇಚಿಗೆ ಸಿಲುಕಿದ್ದಾರೆ.