’ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದೇನಲ್ಲ, ಅವರ ಮನವೊಲಿಸಲ್ಲ!’

Jul 1, 2019, 9:30 PM IST

ಬೆಂಗಳೂರು (ಜು.01): ಒಂದೇ ದಿನ ಇಬ್ಬರು ಶಾಸಕರು ರಾಜೀನಾಮೆ ನೀಡಿರೋದು ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳಿಗೆ ಎಡೆಮಾಡಿಕೊಟ್ಟಿದೆ. ವಿಜಯನಗರ ಶಾಸಕ ಆನಂದ್ ಸಿಂಗ್ ಅನಿರೀಕ್ಷಿತ ರಾಜೀನಾಮೆ  ಮೈತ್ರಿ ಸರ್ಕಾರಕ್ಕೆ ತಲೆನೋವು ತಂದಿದೆ.

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಗೋಕಾಕ್‌ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಕೂಡಾ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ರವಾನಿಸಿದ್ದಾರೆ. ರಮೇಶ್ ರಾಜೀನಾಮೆ ಬಗ್ಗೆ ಅವರ ಸಹೋದರ, ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...