ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!