ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!