ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?