ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ