ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

ವಿಶ್ವಸಂಸ್ಥೆಯಲ್ಲಿ ಗುದ್ದಾಡಿ ತಮಿಳುನಾಡಿನಲ್ಲಿ ಮುದ್ದಾಡುತ್ತಿರುವ ಮೋದಿ-ಕ್ಸಿ!

Published : Oct 11, 2019, 06:32 PM IST

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಸ್ವಾಗತಿಸಲು ಸ್ವತಃ ಪ್ರಧಾನಿಯೇ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತ ಹಾಗೂ ಚೀನಾದ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಇಂದು ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅವರ ಮೂರನೇ ಅನೌಪಚಾರಿಕ ಸಭೆ ಹಾಗೂ ಚೀನಾ ಅಧ್ಯಕ್ಷರೊಂದಿಗಿನ 2ನೇ ಅನೌಪಚಾರಿಕ ಶೃಂಗ ತಮಿಳುನಾಡಿನ ಕಡಲತಡಿಯ ಪ್ರವಾಸಿ ತಾಣ ಮಾಮಲ್ಲಾಪುರಂನಲ್ಲಿ ಆಯೋಜಿತವಾಗಿದೆ. ಈ ವೇಳೆ ದ್ವಿಪಕ್ಷೀಯ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಚೀನಾ ಹಾಗೂ ಭಾರತದ ನಡುವಿನ ಸಂಬಂಧಕ್ಕೆ 2000 ವರ್ಷಗಳ ಇತಿಹಾಸವಿದೆ. ಪಲ್ಲವರ ಆಳ್ವಿಕೆಗೆ ಒಳಪಟ್ಟಿದ್ದ ಚೆನ್ನೈನಿಂದ 50 ಕಿ.ಮೀ. ದೂರವಿರುವ ಮಾಮಲ್ಲಾಪುರಂ ಪಟ್ಟಣ ಹಾಗೂ ಚೀನಾದ ನಡುವೆ ಪ್ರಾಚೀನ ಕಾಲದಲ್ಲೇ ರಕ್ಷಣಾ ಹಾಗೂ ವ್ಯಾಪಾರ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಉತ್ಖನನದ ವೇಳೆ ಲಭಿಸಿರುವ ನಾಣ್ಯಗಳು ಮತ್ತು ಚಿಹ್ನೆಗಳು ಇದನ್ನು ದೃಢಪಡಿಸಿವೆ. ಪಲ್ಲವರಿಗೂ ಮುನ್ನವೇ ಅಸ್ತಿತ್ವದಲ್ಲಿದ್ದ ಈ ಪಟ್ಟಣ, ಭಾರತ ಮತ್ತು ಚೀನಾ ನಡುವೆ ರೇಷ್ಮೆ ಹಾಗೂ ಸಂಬಾರ ಪದಾರ್ಥಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಮಾಮಲ್ಲಾಪುರಂನಲ್ಲಿ ಶೃಂಗಸಭೆ ನಡೆಯುತ್ತಿದೆ. ಕ್ಸಿ ಜಿನ್'ಪಿಂಗ್ ಅವರನ್ನು ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸತಮಿಳುನಾಡು ಸಿಎಂ ಪಳನಿಸ್ವಾಮಿ ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಂಡರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!