ಬಿಟ್ಟುಹೋಗಲ್ಲ, ಕಾಂಗ್ರೆಸ್‌ನಲ್ಲೇ ಎಲ್ಲಾ! ರಮೇಶ್ ಜಾರಕಿಹೊಳಿ ಆಪ್ತನಿಂದ ಕೈಗೆ ಬೆಲ್ಲ

Apr 26, 2019, 5:25 PM IST

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಂಡಾಯವೆದ್ದಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡ್ತಾರಾ? ಇಲ್ವೋ? ಎಂಬುವುದು ಸದ್ಯ ರಾಜ್ಯ ರಾಜಕಾರಣದಲ್ಲಿ  ನಡೆಯುತ್ತಿರುವ ಬಿಸಿಬಿಸಿ ಚರ್ಚೆ.  ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡೋ ವಿಚಾರ ಗೊತ್ತಿಲ್ಲ, ಅವರು ಕಾಂಗ್ರಸ್ ಬಿಟ್ಟು ಹೋಗಲ್ಲ ಎಂದು ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ ಹೇಳಿದ್ದಾರೆ. ಇನ್ನೊಂದು ಕಡೆ, ರಾಜೀನಾಮೆ ಕೊಟ್ರೆ ಸೂಕ್ತ ಕ್ರಮ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.