ಕುಕ್ಕಿದ ವಿಶ್ವನಾಥ್‌ಗೆ ಮಾತಿನಲ್ಲೇ ಬಡಿದ ಸಿದ್ದರಾಮಯ್ಯ!

Jul 4, 2019, 2:33 PM IST

ಬೆಂಗಳೂರು (ಜು.04): ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ, ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎಂಬ ಎಚ್. ವಿಶ್ವನಾಥ್ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ.

ಕೊಟ್ಟ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಲು ಆಗದೇ ಇದ್ದವರು, ನಮ್ಮ ಬಗ್ಗೆ ಏನ್ ಮಾತನಾಡೋದು ಎಂದು ಖಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.