ದರ್ಶನ್ ಮನೆ ಮೇಲೆ ಕಲ್ಲು ತೂರಾಟ; ನಿವಾಸಕ್ಕೆ ಭದ್ರತೆ

Mar 23, 2019, 4:21 PM IST

ಅಕ್ಕಿ ಹೆಬ್ಬಾಳು ಗ್ರಾಮದ ಜೆಡಿಎಸ್ ಪ್ರಚಾರ ಸಭೆಯಲ್ಲಿ ದರ್ಶನ್ ಪರ ಜೈಕಾರ ಹಾಕಿದ್ದಾರೆ. ಡಿ ಬಾಸ್ ಡಿ ಬಾಸ್ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಅಲ್ಲಿಗೆ ಬಂದ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ನಿಖಿಲ್ ಪರ ಘೋಷಣೆ ಕೂಗಿದ್ದಾರೆ. ಆಗ ಮಾತಿನ ಚಕಮಕಿ ನಡೆದಿದೆ. ಈ ಘಟನೆ ಕೆ ಆರ್ ಪೇಟೆಯ ಅಕ್ಕಿ ಹೆಬ್ಬಾಳದಲ್ಲಿ ನಡೆದಿದೆ. ಇನ್ನೊಂದು ಕಡೆ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.