ಮೈತ್ರಿನಾಯಕರಿಗೆ ಸೆಡ್ಡು? ಸ್ಪರ್ಧೆ ಖಚಿತ ಎಂದ ಸುಮಲತಾ!

Mar 4, 2019, 6:01 PM IST

ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯಾದ್ಯಂತ ಕುತೂಹಲ ಕೆರಳಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೊಸ ಹೊಸ ಬೆಳವಣಿಗೆಗಳು ಘಟಿಸುತ್ತಿವೆ. ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಷ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಜೆಡಿಎಸ್ ಬೇರೆ ಲೆಕ್ಕಾಚಾರ ಹಾಕಿಕೊಂಡಿದೆ; ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಇಲ್ಲಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ,  ಟಿಕೆಟ್ ಸಿಗದೇ ಇದ್ದರೆ ಮುಂದಿನ ನಡೆಯ ಕುರಿತು ಸುಮಲತಾ ಸುಳಿವು ನೀಡಿದ್ದಾರೆ.