ಎಲೆಮರೆಯ ಕಾಯಿಯಂತಿದ್ದ ಸಾಧಕಿಯರ ಗುರುತಿಸಿ ಸನ್ಮಾನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ

ಎಲೆಮರೆಯ ಕಾಯಿಯಂತಿದ್ದ ಸಾಧಕಿಯರ ಗುರುತಿಸಿ ಸನ್ಮಾನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ

Published : Jul 02, 2025, 11:57 AM IST
ಉತ್ತರ ಕರ್ನಾಟಕದ ಎಲೆಮರೆ ಕಾಯಂತೆ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸುವರ್ಣ ಸಾಧಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸುದ್ದಿ ಪ್ರಸಾರ ನಮ್ಮ ಕರ್ತವ್ಯ. ಅದನ್ನೆಂದು ಬಿಟ್ಟಿಲ್ಲ. ಬಿಡುವುದೂ ಇಲ್ಲ. ಆದರೆ, ಸುದ್ದಿಯಾಚೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಣೆಯಲ್ಲೂ ನಾವು ಮುಂದಿದ್ದೇವೆ. ಕೊಡಗು ಹಾಗೂ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿದಾಗ ಸಂತ್ರಸ್ತರಿಗೆ ನಮ್ಮ ವೀಕ್ಷಕರ ನೆರವಿನೊಂದಿಗೆ ಮೊದಲು ಧಾವಿಸಿದ ಮಾಧ್ಯಮ ಸಂಸ್ಥೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್.

ಸಾಧಿಸಿದ್ದರೂ ಸಮಾಜದ ಗುರುತಿಸುವಿಕೆ, ಗೌರವದಿಂದ ವಂಚಿತರಾದವರನ್ನು ಗುರುತಿಸಿ ಗೌರವಿಸಿ ಪ್ರಚಾರ ಮಾಡುವುದುನ್ನೂ ಕೂಡ ಆರಂಭಿಸಿದ್ದು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್. ಅಸಾಮಾನ್ಯ ಸಾಧಕರಿಗಾಗಿ ಅಸಾಮಾನ್ಯ ಕನ್ನಡಿಗ, ಅತ್ಯುತ್ತಮ ರೈತರಿಗಾಗಿ ರೈತ ರತ್ನ, ಶೌರ್ಯ ಪ್ರಶಸ್ತಿ, ಉದ್ಯಮಿಗಳಿಗಾಗಿ ಕರ್ನಾಟಕ ಬ್ಯೂಸಿನೆಸ್ ಅವಾರ್ಡ್ಸ್, ಉತ್ತಮ ವೈದ್ಯಕೀಯ ಸೇವೆಗಾಗಿ ಹೆಲ್ತ್ ಎಕ್ಸಲೆನ್ಸ್ ಅವಾರ್ಡ್, ಅತ್ಯುತ್ತಮ ಇಂಜಿನಿಯರ್ಸ್ಗಳನ್ನು ಪುರಸ್ಕರಿಸಲೆಂದು ಎಮಿನೆಂಟ್ ಇಂಜಿನಿಯರ್ಸ್ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುತ್ತಿದ್ದೇವೆ. ನಮ್ಮಿಂದ ಗುರುತಿಸಲ್ಪಟ್ಟ ನಂತರದಲ್ಲಿ ಅನೇಕರಿಗೆ ರಾಜ್ಯ, ರಾಷ್ಟ್ರ, ಪದ್ಮ ಪ್ರಶಸ್ತಿಗಳು ಸಂದಿರುವುದು ನಮ್ಮ ಹೆಮ್ಮೆ.

ಕರುನಾಡಿನ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಶುರು ಮಾಡಿದ್ದೂ ಕೂಡ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್. ಬಹರೇನ್, ದುಬೈ, ಮಲೇಷ್ಯಾ, ವಿಯೇಟ್ನಾಂ, ಇಂಗ್ಲೆಂಡ್, ಹಾಂಗ್ಕಾಂಗ್ ಸೇರಿ ಒಟ್ಟು ಏಳು ಅಂತಾರಾಷ್ಟ್ರೀಯ ಕಾರ್ಯಕ್ರಮ ನಡೆಸಿ ಯಶಸ್ವಿಯಾಗಿದ್ದೇವೆ.

ಇದೇ ರೀತಿಯಾಗಿ ಮಹಿಳಾ ಸಾಧಕಿಯರಿಗಾಗಿ ಸುವರ್ಣ ಸಾಧಕಿ ಪ್ರಶಸ್ತಿ ನೀಡಲೆಂದೇ ಬೆಳಗಾವಿಯಲ್ಲಿ ಸೇರಿದ್ದೇವೆ. ಉತ್ತರ ಕರ್ನಾಟಕದ ಸಾಧಕಿಯರಿಗೆ ಆದ್ಯತೆ ಕೊಟ್ಟು ಈ ಕಾರ್ಯಕ್ರಮ ಸಂಘಟಿಸಲಾಗಿದೆ. ಎಲೆಮರೆ ಕಾಯಂತೆ ಪುರುಷರಿಗೆ ಸರಿಸಮನಾಗಿ ಸೇವೆಯಲ್ಲಿ ತೊಡಗಿರುವವರನ್ನು ಹುಡುಕಿ ಹೆಕ್ಕಿ ನಿಮ್ಮ ಮುಂದೆ ತಂದಿದ್ದೇವೆ. ಈ ಪ್ರಶಸ್ತಿಯು ಪುರಸ್ಕೃತರಿಗೆ ಇನ್ನಷ್ಟು ಸಾಧಿಸಿ ಮುನ್ನಡೆಯಲು ಶಕ್ತಿ ತುಂಬಲಿ. ಇದನ್ನು ನೋಡುವವರಿಗೆ ಪ್ರೇರಣೆಯಾಗಲಿ ಎಂದು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾರೈಸುತ್ತದೆ.

19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
Read more