ಎಲೆಮರೆಯ ಕಾಯಿಯಂತಿದ್ದ ಸಾಧಕಿಯರ ಗುರುತಿಸಿ ಸನ್ಮಾನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ

ಎಲೆಮರೆಯ ಕಾಯಿಯಂತಿದ್ದ ಸಾಧಕಿಯರ ಗುರುತಿಸಿ ಸನ್ಮಾನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ

Published : Jul 02, 2025, 11:57 AM IST
ಉತ್ತರ ಕರ್ನಾಟಕದ ಎಲೆಮರೆ ಕಾಯಂತೆ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸುವರ್ಣ ಸಾಧಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸುದ್ದಿ ಪ್ರಸಾರ ನಮ್ಮ ಕರ್ತವ್ಯ. ಅದನ್ನೆಂದು ಬಿಟ್ಟಿಲ್ಲ. ಬಿಡುವುದೂ ಇಲ್ಲ. ಆದರೆ, ಸುದ್ದಿಯಾಚೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಣೆಯಲ್ಲೂ ನಾವು ಮುಂದಿದ್ದೇವೆ. ಕೊಡಗು ಹಾಗೂ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿದಾಗ ಸಂತ್ರಸ್ತರಿಗೆ ನಮ್ಮ ವೀಕ್ಷಕರ ನೆರವಿನೊಂದಿಗೆ ಮೊದಲು ಧಾವಿಸಿದ ಮಾಧ್ಯಮ ಸಂಸ್ಥೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್.

ಸಾಧಿಸಿದ್ದರೂ ಸಮಾಜದ ಗುರುತಿಸುವಿಕೆ, ಗೌರವದಿಂದ ವಂಚಿತರಾದವರನ್ನು ಗುರುತಿಸಿ ಗೌರವಿಸಿ ಪ್ರಚಾರ ಮಾಡುವುದುನ್ನೂ ಕೂಡ ಆರಂಭಿಸಿದ್ದು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್. ಅಸಾಮಾನ್ಯ ಸಾಧಕರಿಗಾಗಿ ಅಸಾಮಾನ್ಯ ಕನ್ನಡಿಗ, ಅತ್ಯುತ್ತಮ ರೈತರಿಗಾಗಿ ರೈತ ರತ್ನ, ಶೌರ್ಯ ಪ್ರಶಸ್ತಿ, ಉದ್ಯಮಿಗಳಿಗಾಗಿ ಕರ್ನಾಟಕ ಬ್ಯೂಸಿನೆಸ್ ಅವಾರ್ಡ್ಸ್, ಉತ್ತಮ ವೈದ್ಯಕೀಯ ಸೇವೆಗಾಗಿ ಹೆಲ್ತ್ ಎಕ್ಸಲೆನ್ಸ್ ಅವಾರ್ಡ್, ಅತ್ಯುತ್ತಮ ಇಂಜಿನಿಯರ್ಸ್ಗಳನ್ನು ಪುರಸ್ಕರಿಸಲೆಂದು ಎಮಿನೆಂಟ್ ಇಂಜಿನಿಯರ್ಸ್ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುತ್ತಿದ್ದೇವೆ. ನಮ್ಮಿಂದ ಗುರುತಿಸಲ್ಪಟ್ಟ ನಂತರದಲ್ಲಿ ಅನೇಕರಿಗೆ ರಾಜ್ಯ, ರಾಷ್ಟ್ರ, ಪದ್ಮ ಪ್ರಶಸ್ತಿಗಳು ಸಂದಿರುವುದು ನಮ್ಮ ಹೆಮ್ಮೆ.

ಕರುನಾಡಿನ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಶುರು ಮಾಡಿದ್ದೂ ಕೂಡ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್. ಬಹರೇನ್, ದುಬೈ, ಮಲೇಷ್ಯಾ, ವಿಯೇಟ್ನಾಂ, ಇಂಗ್ಲೆಂಡ್, ಹಾಂಗ್ಕಾಂಗ್ ಸೇರಿ ಒಟ್ಟು ಏಳು ಅಂತಾರಾಷ್ಟ್ರೀಯ ಕಾರ್ಯಕ್ರಮ ನಡೆಸಿ ಯಶಸ್ವಿಯಾಗಿದ್ದೇವೆ.

ಇದೇ ರೀತಿಯಾಗಿ ಮಹಿಳಾ ಸಾಧಕಿಯರಿಗಾಗಿ ಸುವರ್ಣ ಸಾಧಕಿ ಪ್ರಶಸ್ತಿ ನೀಡಲೆಂದೇ ಬೆಳಗಾವಿಯಲ್ಲಿ ಸೇರಿದ್ದೇವೆ. ಉತ್ತರ ಕರ್ನಾಟಕದ ಸಾಧಕಿಯರಿಗೆ ಆದ್ಯತೆ ಕೊಟ್ಟು ಈ ಕಾರ್ಯಕ್ರಮ ಸಂಘಟಿಸಲಾಗಿದೆ. ಎಲೆಮರೆ ಕಾಯಂತೆ ಪುರುಷರಿಗೆ ಸರಿಸಮನಾಗಿ ಸೇವೆಯಲ್ಲಿ ತೊಡಗಿರುವವರನ್ನು ಹುಡುಕಿ ಹೆಕ್ಕಿ ನಿಮ್ಮ ಮುಂದೆ ತಂದಿದ್ದೇವೆ. ಈ ಪ್ರಶಸ್ತಿಯು ಪುರಸ್ಕೃತರಿಗೆ ಇನ್ನಷ್ಟು ಸಾಧಿಸಿ ಮುನ್ನಡೆಯಲು ಶಕ್ತಿ ತುಂಬಲಿ. ಇದನ್ನು ನೋಡುವವರಿಗೆ ಪ್ರೇರಣೆಯಾಗಲಿ ಎಂದು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾರೈಸುತ್ತದೆ.

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more