ಗೊಗೋಯ್ ನಿವೃತ್ತಿ ಮುನ್ನ ಅಯೋಧ್ಯೆ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ?

Sep 19, 2019, 6:38 PM IST

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಎ. ಬಾಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಸಾಂವಿಧಾನಿಕ ಪಂಚ ಪೀಠ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಆದರೆ 2019ರ ನವೆಂಬರ್ 17ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿ ಹೊಂದಲಿದ್ದಾರೆ. ಹೀಗಿರುವಾಗ ಸಿಜೆಐ ಗೊಗೋಯ್ ನಿವೃತ್ತಿಗೂ ಮುನ್ನ ಅಯೋಧ್ಯೆ ವಿವಾದಿತ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ....? ಮುಂದೇನು?