ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Jul 31, 2020, 4:34 PM IST

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಕೊರೋನಾದಲ್ಲೂ ಭ್ರಷ್ಟಾಚಾರ ಮಾಡೋದು ಬಿಜೆಪಿ ಸಂಸ್ಕಾರವೇ..?

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.