ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

Published : Apr 29, 2019, 06:26 PM ISTUpdated : Apr 29, 2019, 06:28 PM IST

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ಕುಮಾರಧಾರಾ ನದಿ ಸ್ವಚ್ಛ ಮಾಡಲು ಇಳಿದ ಯುವ ಬ್ರಿಗೇಡ್ ತಂಡಕ್ಕೆ ಸಿಕ್ಕಿದ್ದು ರಾಶಿ ರಾಶಿ ಕಸದ ಪರ್ವತಗಳೂ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನದಿಗಳಿದ ಸ್ವಯಂ ಸೇವಕರು ಪ್ಲಾಸ್ಟಿಕ್ ಸೇರಿದಂತೆ ಇತರೇ ತ್ಯಾಜ್ಯಗಳನ್ನು ಕಂಡು ದಂಗಾಗಿ ಹೋಗಿದ್ದಾರೆ.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿರುವುದು ನಮ್ಮ ಜನ ಎತ್ತ ಸಾಗಿದ್ದಾರೆ ಎಂಬ ಕತೆ ಹೇಳುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಇಷ್ಟೊಂದು ಬಾಟಲಿ ಎಲ್ಲಿಂದ ಬಂತು ಎಂಬುದಕ್ಕೆ ಉತ್ತರ ನಮಗೆ ಗೊತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!