ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

Published : Apr 29, 2019, 06:26 PM ISTUpdated : Apr 29, 2019, 06:28 PM IST

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ಕುಮಾರಧಾರಾ ನದಿ ಸ್ವಚ್ಛ ಮಾಡಲು ಇಳಿದ ಯುವ ಬ್ರಿಗೇಡ್ ತಂಡಕ್ಕೆ ಸಿಕ್ಕಿದ್ದು ರಾಶಿ ರಾಶಿ ಕಸದ ಪರ್ವತಗಳೂ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನದಿಗಳಿದ ಸ್ವಯಂ ಸೇವಕರು ಪ್ಲಾಸ್ಟಿಕ್ ಸೇರಿದಂತೆ ಇತರೇ ತ್ಯಾಜ್ಯಗಳನ್ನು ಕಂಡು ದಂಗಾಗಿ ಹೋಗಿದ್ದಾರೆ.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿರುವುದು ನಮ್ಮ ಜನ ಎತ್ತ ಸಾಗಿದ್ದಾರೆ ಎಂಬ ಕತೆ ಹೇಳುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಇಷ್ಟೊಂದು ಬಾಟಲಿ ಎಲ್ಲಿಂದ ಬಂತು ಎಂಬುದಕ್ಕೆ ಉತ್ತರ ನಮಗೆ ಗೊತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?