ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

Published : Apr 29, 2019, 06:26 PM ISTUpdated : Apr 29, 2019, 06:28 PM IST

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ಕುಮಾರಧಾರಾ ನದಿ ಸ್ವಚ್ಛ ಮಾಡಲು ಇಳಿದ ಯುವ ಬ್ರಿಗೇಡ್ ತಂಡಕ್ಕೆ ಸಿಕ್ಕಿದ್ದು ರಾಶಿ ರಾಶಿ ಕಸದ ಪರ್ವತಗಳೂ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನದಿಗಳಿದ ಸ್ವಯಂ ಸೇವಕರು ಪ್ಲಾಸ್ಟಿಕ್ ಸೇರಿದಂತೆ ಇತರೇ ತ್ಯಾಜ್ಯಗಳನ್ನು ಕಂಡು ದಂಗಾಗಿ ಹೋಗಿದ್ದಾರೆ.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿರುವುದು ನಮ್ಮ ಜನ ಎತ್ತ ಸಾಗಿದ್ದಾರೆ ಎಂಬ ಕತೆ ಹೇಳುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಇಷ್ಟೊಂದು ಬಾಟಲಿ ಎಲ್ಲಿಂದ ಬಂತು ಎಂಬುದಕ್ಕೆ ಉತ್ತರ ನಮಗೆ ಗೊತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!