ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಶುಕ್ಲ ಪಕ್ಷ, ಶನಿವಾರ, ತೃತೀಯ ತಿಥಿ, ಉತ್ತರ ನಕ್ಷತ್ರ.
ಶ್ರಾವಣ ತೃತೀಯದಲ್ಲಿ ಸಂಪತ್ ಗೌರಿ ರಥವನ್ನು ಮಾಡಬಹುದು. ಸಿಂಹ ರಾಶಿಯವರಿಗೆ ಈ ದಿನ ಮಿಶ್ರ ಫಲಗಳು ಇವೆ. ಅನಗತ್ಯ ವಿಚಾರಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಲಾಭವಿದ್ದು, ಸರ್ಕಾರಿ ಕ್ಷೇತ್ರದಲ್ಲಿರುವವರಿಗೆ ಅನುಕೂಲವಾಗಲಿದೆ. ಇಂದು ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ.
ಇದನ್ನೂ ವೀಕ್ಷಿಸಿ: News Hour: ಜನರಿಗೆ ಟೋಪಿ ಹಾಕಿ, ಚಿಕನ್ ಲೆಗ್ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್ಡಿಕೆ