ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮಹತ್ವದ ಮಾತು ಕೊಟ್ಟುಬಂದಿದ್ದಾರೆ. ಆ ಮಾತು ಏನು ಎನ್ನುವುದನ್ನು ಸ್ವತಃ ಬಿಎಸ್ವೈ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರು,(ಆಗಸ್ಟ್.27): ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಆಯ್ಕೆಗೊಂಡ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದಾರೆ.
ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪಗೆ ವರಿಷ್ಠರ ಟಾಸ್ಕ್
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮಹತ್ವದ ಮಾತು ಕೊಟ್ಟುಬಂದಿದ್ದಾರೆ. ಆ ಮಾತು ಏನು ಎನ್ನುವುದನ್ನು ಸ್ವತಃ ಬಿಎಸ್ವೈ ಮಾಧ್ಯಮಗಳಿಗೆ ತಿಳಿಸಿದ್ದಾರೆ.