ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

Published : Oct 27, 2022, 11:33 PM IST

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more