ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

Published : Oct 27, 2022, 11:33 PM IST

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more