ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

Published : Oct 27, 2022, 11:33 PM IST

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more