ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ 17 ಅಭ್ಯರ್ಥಿಗಳು!

ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ 17 ಅಭ್ಯರ್ಥಿಗಳು!

Published : May 07, 2024, 09:13 AM IST

ಎರಡನೇ ಹಂತದ ಮತದಾನ ಶುರುವಾಗಿದೆ. ಈ ಬಾರಿ 17 ಅಭ್ಯರ್ಥಿಗಳು ಮೊದಲ ಬಾರಿ ಲೋಕ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಕದನಕಣದಲ್ಲಿ ಕಾವು ಜೋರಾಗಿದೆ. 227 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾದ್ರೆ..ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ. 2.59 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.

ಲೋಕಸಭಾ ಚುನಾವಣೆಗೆ(Lok Sabha Elections 2024) ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ(Voting) ನಡೆಯುತ್ತಿದ್ದು, ಕಾಂಗ್ರೆಸ್(Congress) 12 ಮಂದಿ ಹಾಗೂ ಬಿಜೆಪಿ(BJP) ಐವರು ರಣಕಲಿಗಳು ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಧುಮುಕಿದ್ದಾರೆ. ಎಲ್ಲರೂ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೀದರ್ ಲೋಕಸಭಾ ಕೈ ಅಭ್ಯರ್ಥಿಯಾಗಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಕಣದಲ್ಲಿದ್ದಾರೆ. 26ನೇ ವಯಸ್ಸಿಗೆ ಲೋಕಸಭೆ ಅಖಾಡಕ್ಕೆ ಧುಮುಕಿರುವ ಸಾಗರ್ ಖಂಡ್ರೆ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಅತ್ತ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಸ್ಪರ್ಥೆಯಲ್ಲಿದ್ದು, ಮೃಣಾಲ್ಗೆ ಲಿಂಗಾಯತ ಸಮುದಾಯ, ಅಹಿಂದ ಬಲವಿದೆ.ಎಐಸಿಸಿ ಅಧ್ಯಕ್ಷ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಮೊದಲ ಬಾರಿಗೆ ಕಲಬುರಗಿಯಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇನ್ನೂ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಅಲಗೂರು ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿದ್ದು, ಸಚಿವ ಎಂ.ಬಿ ಪಾಟೀಲ್ ಅತ್ಯಾಪ್ತರಾಗಿ ಗುರುತಿಸಿಕೊಂಡಿದ್ದಾರೆ.ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಶಿವಾನಂದ ಪುತ್ರಿ ಸಂಯುಕ್ತಾ ಪಾಟೀಲ್ ಮೊದಲ ಬಾರಿ ಲೊಕಸಭೆ ಚುನಾವಣೆ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಕೂಡ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ‘ಏನೂ ಕೇಳಬೇಡಿ, ನನಗೇನು ಗೊತ್ತಿಲ್ಲ’ ಎಸ್‌ಐಟಿ ಅಧಿಕಾರಿಗಳ ನೂರು ಪ್ರಶ್ನೆಗೆ ರೇವಣ್ಣ ಒಂದೇ ಆನ್ಸರ್‌!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more