Vidhana Parishad: ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದೇನು..? ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ..!

May 23, 2024, 11:02 AM IST

ವಿಧಾನಪರಿಷತ್(Vidhana Parishad ) ಸ್ಥಾನದ ಕನಸು ಕಾಣ್ತಿದ್ದವರಿಗೆ ಭಾರೀ ನಿರಾಸೆ ಉಂಟಾಗಿದ್ದು, ಕೇಸರಿ(BJP) ಪಡಸಾಲೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಆಕಾಂಕ್ಷಿಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಾಯಕರತ್ತ ಪರಿಷತ್ ಸ್ಥಾನದ ಆಕಾಂಕ್ಷಿಗಳ ಚಿತ್ತ ಮೂಡಿದೆ. ಹೆಸರು ಅಂತಿಮಗೊಳಿಸುವ ಜವಾಬ್ದಾರಿಯಿಂದ ರಾಜ್ಯ ನಾಯಕರು ಹಿಂದೆ ಸರಿದಿದ್ದಾರೆ. ಹೈಕಮಾಂಡ್ ಕೊನೆಯ ತೀರ್ಮಾನ ಮಾಡಲಿ ಎಂದು ಕೋರ್ ಕಮಿಟಿ(Core committee meeting) ಸುಮ್ಮನಾಗಿದೆ.  ನೂತನ ಪರಿಷತ್ ಸದಸ್ಯರ ಹೆಸರು ತೀರ್ಮಾನದ ಜವಾಬ್ದಾರಿಯನ್ನು ಕೇಂದ್ರ ನಾಯಕರಿಗೆ ಬಿಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬರೋಬ್ಬರಿ 40 ಆಕಾಂಕ್ಷಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆದಿದ್ದು, ಭಾರೀ ಲಾಬಿ ನಡೆಸಿರುವ ಹೆಸರುಗಳ ಪಟ್ಟಿ ಕಂಡು ನಾಯಕರು ಗಾಬರಿಯಾಗಿದ್ದಾರೆ. ಸಿಗುವ ಮೂರು ಸ್ಥಾನಕ್ಕೆ 40 ಆಕಾಂಕ್ಷಿಗಳನ್ನು ಕಂಡು ಗಾಬರಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಏನಿದು ಪುರಿ ರತ್ನ ಭಂಡಾರ ವಿವಾದ..! ಓಡಿಶಾದಲ್ಲಿ ವಿ.ಕೆ ಪಾಂಡಿಯನ್ ಟಾರ್ಗೆಟ್ ಮಾಡ್ತಾ ಕೇಸರಿಪಡೆ..?