ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

Published : May 04, 2023, 10:43 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ.

ಮೈಸೂರು  (ಮೇ.04):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ಎರಡನೇ ಸುತ್ತಿನ ಮತ ಭೇಟೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತಯಾಚನೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯಗೆ ಸ್ಯಾಂಡಲ್‌ವುಡ್ ನಟ ನಟಿಯರ ಸಾಥ್ ಸಿಕ್ಕಿದೆ. ಡಾ. ಶಿವರಾಜ್ ಕುಮಾರ್, ರಮ್ಯಾ, ದುನಿಯಾ ವಿಜಯ್ ಸೇರಿದಂತೆ ಸ್ಟಾರ್ ಕ್ಯಾಂಪೇನ್ ಶುರುವಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ, ಜಮೀರ್ ಅಹ್ಮದ್ ಖಾನ್, ಗೀತಾ ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ ಬೆಳಗ್ಗೆ ರಾಂಪುರ, ಗೊದ್ದನಪುರ, ಮರಳೂರು, ತಾಂಡವಪುರದಲ್ಲಿ ಮತಯಾಚನೆ ಮಾಡಿದರು. ಮಧ್ಯಾಹ್ನ ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆಯಲ್ಲಿ ಹಾಗೂ ಸಂಜೆ ಸುತ್ತೂರು, ಬಿಳಿಗೆರೆ, ನಗರ್ಲೆ, ಮಲ್ಲೂಪುರದಲ್ಲಿ ಪ್ರಚಾರ ಮಾಡಿದರು.

ಪ್ರಚಾರದ ವೇಳೆ ನಾನೆಂದು ನಿಮ್ಮವನು, ನಿಮಗಾಗಿ ಬಂದವನು ಎಂದು ಸಿಂಹದ ಮರಿ ಹಾಡಿನ ಮೂಲಕ  ಶಿವಣ್ಣ ಮತಯಾಚನೆ ಮಾಡಿದರು. ತಾಂಡವಪುರ ಗ್ರಾಮದಲ್ಲಿ ಹಾಡು ಹಾಡಿದ ಶಿವಣ್ಣ, ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾನು ಹೇಳುವುದು ಬೇಡ ಎಲ್ಲ ನಿಮಗೇ ಗೊತ್ತಿದೆ. ಅಪ್ಪಾಜಿ ಯಾವಾಗಲೂ ನಮ್ಮ ಕಾಡಿನವರು ಅನ್ನುತ್ತಿದ್ದರು. ಅಪ್ಪಾಜಿ, ನಮ್ಮ ಜತೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಡನಾಟ ಇದೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು. ಇನ್ನು ಶಿವರಾಜ್‌ ಕುಮಾರ್‌ ಅವರನ್ನು ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more