ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

Published : May 04, 2023, 10:43 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ.

ಮೈಸೂರು  (ಮೇ.04):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ಎರಡನೇ ಸುತ್ತಿನ ಮತ ಭೇಟೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತಯಾಚನೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯಗೆ ಸ್ಯಾಂಡಲ್‌ವುಡ್ ನಟ ನಟಿಯರ ಸಾಥ್ ಸಿಕ್ಕಿದೆ. ಡಾ. ಶಿವರಾಜ್ ಕುಮಾರ್, ರಮ್ಯಾ, ದುನಿಯಾ ವಿಜಯ್ ಸೇರಿದಂತೆ ಸ್ಟಾರ್ ಕ್ಯಾಂಪೇನ್ ಶುರುವಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ, ಜಮೀರ್ ಅಹ್ಮದ್ ಖಾನ್, ಗೀತಾ ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ ಬೆಳಗ್ಗೆ ರಾಂಪುರ, ಗೊದ್ದನಪುರ, ಮರಳೂರು, ತಾಂಡವಪುರದಲ್ಲಿ ಮತಯಾಚನೆ ಮಾಡಿದರು. ಮಧ್ಯಾಹ್ನ ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆಯಲ್ಲಿ ಹಾಗೂ ಸಂಜೆ ಸುತ್ತೂರು, ಬಿಳಿಗೆರೆ, ನಗರ್ಲೆ, ಮಲ್ಲೂಪುರದಲ್ಲಿ ಪ್ರಚಾರ ಮಾಡಿದರು.

ಪ್ರಚಾರದ ವೇಳೆ ನಾನೆಂದು ನಿಮ್ಮವನು, ನಿಮಗಾಗಿ ಬಂದವನು ಎಂದು ಸಿಂಹದ ಮರಿ ಹಾಡಿನ ಮೂಲಕ  ಶಿವಣ್ಣ ಮತಯಾಚನೆ ಮಾಡಿದರು. ತಾಂಡವಪುರ ಗ್ರಾಮದಲ್ಲಿ ಹಾಡು ಹಾಡಿದ ಶಿವಣ್ಣ, ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾನು ಹೇಳುವುದು ಬೇಡ ಎಲ್ಲ ನಿಮಗೇ ಗೊತ್ತಿದೆ. ಅಪ್ಪಾಜಿ ಯಾವಾಗಲೂ ನಮ್ಮ ಕಾಡಿನವರು ಅನ್ನುತ್ತಿದ್ದರು. ಅಪ್ಪಾಜಿ, ನಮ್ಮ ಜತೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಡನಾಟ ಇದೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು. ಇನ್ನು ಶಿವರಾಜ್‌ ಕುಮಾರ್‌ ಅವರನ್ನು ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more