ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

Published : May 04, 2023, 10:43 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ.

ಮೈಸೂರು  (ಮೇ.04):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ಎರಡನೇ ಸುತ್ತಿನ ಮತ ಭೇಟೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತಯಾಚನೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯಗೆ ಸ್ಯಾಂಡಲ್‌ವುಡ್ ನಟ ನಟಿಯರ ಸಾಥ್ ಸಿಕ್ಕಿದೆ. ಡಾ. ಶಿವರಾಜ್ ಕುಮಾರ್, ರಮ್ಯಾ, ದುನಿಯಾ ವಿಜಯ್ ಸೇರಿದಂತೆ ಸ್ಟಾರ್ ಕ್ಯಾಂಪೇನ್ ಶುರುವಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ, ಜಮೀರ್ ಅಹ್ಮದ್ ಖಾನ್, ಗೀತಾ ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ ಬೆಳಗ್ಗೆ ರಾಂಪುರ, ಗೊದ್ದನಪುರ, ಮರಳೂರು, ತಾಂಡವಪುರದಲ್ಲಿ ಮತಯಾಚನೆ ಮಾಡಿದರು. ಮಧ್ಯಾಹ್ನ ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆಯಲ್ಲಿ ಹಾಗೂ ಸಂಜೆ ಸುತ್ತೂರು, ಬಿಳಿಗೆರೆ, ನಗರ್ಲೆ, ಮಲ್ಲೂಪುರದಲ್ಲಿ ಪ್ರಚಾರ ಮಾಡಿದರು.

ಪ್ರಚಾರದ ವೇಳೆ ನಾನೆಂದು ನಿಮ್ಮವನು, ನಿಮಗಾಗಿ ಬಂದವನು ಎಂದು ಸಿಂಹದ ಮರಿ ಹಾಡಿನ ಮೂಲಕ  ಶಿವಣ್ಣ ಮತಯಾಚನೆ ಮಾಡಿದರು. ತಾಂಡವಪುರ ಗ್ರಾಮದಲ್ಲಿ ಹಾಡು ಹಾಡಿದ ಶಿವಣ್ಣ, ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾನು ಹೇಳುವುದು ಬೇಡ ಎಲ್ಲ ನಿಮಗೇ ಗೊತ್ತಿದೆ. ಅಪ್ಪಾಜಿ ಯಾವಾಗಲೂ ನಮ್ಮ ಕಾಡಿನವರು ಅನ್ನುತ್ತಿದ್ದರು. ಅಪ್ಪಾಜಿ, ನಮ್ಮ ಜತೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಡನಾಟ ಇದೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು. ಇನ್ನು ಶಿವರಾಜ್‌ ಕುಮಾರ್‌ ಅವರನ್ನು ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more