ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

Published : May 04, 2023, 10:43 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ.

ಮೈಸೂರು  (ಮೇ.04):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಲು ವರುಣ ಕ್ಷೇತ್ರದಲ್ಲಿಂದು ತಾರೆಯರ ಹಿಂಡೇ ಆಗಮಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ಎರಡನೇ ಸುತ್ತಿನ ಮತ ಭೇಟೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತಯಾಚನೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯಗೆ ಸ್ಯಾಂಡಲ್‌ವುಡ್ ನಟ ನಟಿಯರ ಸಾಥ್ ಸಿಕ್ಕಿದೆ. ಡಾ. ಶಿವರಾಜ್ ಕುಮಾರ್, ರಮ್ಯಾ, ದುನಿಯಾ ವಿಜಯ್ ಸೇರಿದಂತೆ ಸ್ಟಾರ್ ಕ್ಯಾಂಪೇನ್ ಶುರುವಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ, ಜಮೀರ್ ಅಹ್ಮದ್ ಖಾನ್, ಗೀತಾ ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ ಬೆಳಗ್ಗೆ ರಾಂಪುರ, ಗೊದ್ದನಪುರ, ಮರಳೂರು, ತಾಂಡವಪುರದಲ್ಲಿ ಮತಯಾಚನೆ ಮಾಡಿದರು. ಮಧ್ಯಾಹ್ನ ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆಯಲ್ಲಿ ಹಾಗೂ ಸಂಜೆ ಸುತ್ತೂರು, ಬಿಳಿಗೆರೆ, ನಗರ್ಲೆ, ಮಲ್ಲೂಪುರದಲ್ಲಿ ಪ್ರಚಾರ ಮಾಡಿದರು.

ಪ್ರಚಾರದ ವೇಳೆ ನಾನೆಂದು ನಿಮ್ಮವನು, ನಿಮಗಾಗಿ ಬಂದವನು ಎಂದು ಸಿಂಹದ ಮರಿ ಹಾಡಿನ ಮೂಲಕ  ಶಿವಣ್ಣ ಮತಯಾಚನೆ ಮಾಡಿದರು. ತಾಂಡವಪುರ ಗ್ರಾಮದಲ್ಲಿ ಹಾಡು ಹಾಡಿದ ಶಿವಣ್ಣ, ಸಿದ್ದರಾಮಯ್ಯ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾನು ಹೇಳುವುದು ಬೇಡ ಎಲ್ಲ ನಿಮಗೇ ಗೊತ್ತಿದೆ. ಅಪ್ಪಾಜಿ ಯಾವಾಗಲೂ ನಮ್ಮ ಕಾಡಿನವರು ಅನ್ನುತ್ತಿದ್ದರು. ಅಪ್ಪಾಜಿ, ನಮ್ಮ ಜತೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಡನಾಟ ಇದೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು. ಇನ್ನು ಶಿವರಾಜ್‌ ಕುಮಾರ್‌ ಅವರನ್ನು ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more