ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

Published : Jul 07, 2024, 01:06 PM ISTUpdated : Jul 07, 2024, 01:07 PM IST

ಹಳೇ ಚದುರಂಗದಲ್ಲಿ ಹೊಸ ದಾಳ ಉರುಳಿಸ್ತಾರಾ 'ಚತುರ'ರಾಮಯ್ಯ..?
2005ರಲ್ಲಿ ಗಂಡು ಮೆಟ್ಟಿದ ನೆಲದಿಂದಲೇ ಮೊಳಗಿತ್ತು ಸಿದ್ದು ರಣಘೋಷ..!
ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಹುಬ್ಬಳ್ಳಿಯನ್ನೇ ಆಯ್ಕೆ ಮಾಡಿಕೊಂಡ ಸಿಎಂ..!
 

ಒಂದು ಸಿದ್ದರಾಮೋತ್ಸವ (Siddaramaotsava) ಸಿದ್ದರಾಮಯ್ಯನವರನ್ನು 2ನೇ ಬಾರಿ ಮುಖ್ಯಮಂತ್ರಿ ಪಟ್ಟಕ್ಕೇರಿಸಿತು. ಅದೇ ಸಿದ್ದರಾಮೋತ್ಸವ ಸಿದ್ದು ವೈರಿಗಳ ಸದ್ದನ್ನೇ ಅಡಗಿಸಿಬಿಡ್ತು. ಸಿದ್ದರಾಮಯ್ಯನವರ(Siddaramaiah) ಪಟ್ಟದ ಮೇಲೆ ಹತ್ತಾರು ಕಣ್ಣು. ಮುಖ್ಯಮಂತ್ರಿ ಪಟ್ಟವನ್ನ(CM Post) ಡಿಕೆ ಶಿವಕುಮಾರ್(DK Shivakumar) ಅವ್ರಿಗೆ ಬಿಟ್ಟುಕೊಂಡುವಂತೆ ಸ್ವಾಮೀಜಿಗಳ ಪಟ್ಟು. ಡಿಕೆಶಿ ಆಪ್ತ ಶಾಸಕರಿಂದಲೂ ಸಿಎಂ ಪಟ್ಟಕ್ಕಾಗಿ ಬೇಡಿಕೆ. ಪರಿಣಾಮ, ಕಾಂಗ್ರೆಸ್‌ನಲ್ಲಿ ಖಾಲಿಯಿಲ್ಲದ ಸಿಎಂ ಕುರ್ಚಿಗಾಗಿ ಮಹಾ ಸಂಘರ್ಷ. ಹಾಗಾದ್ರೆ ಹೈಕಮಾಂಡ್ ಹೇಳಿದ್ರೆ ಸಿದ್ದರಾಮಯ್ಯನವರು ಸಿಎಂ ಕುರ್ಚಿಯನ್ನು ಬಿಟ್ಟು ಕೊಡ್ತಾರಾ..? ಗೊತ್ತಿಲ್ಲ.. ಆದ್ರೆ ಸಿದ್ದರಾಮಯ್ಯ ಅಷ್ಟು ಸುಲಭವಾಗಿ ಪಟ್ಟ ಬಿಟ್ಟು ಕೊಡೋ ಪೈಲ್ವಾನ್ ಅಂತೂ ಅಲ್ಲವೇ ಅಲ್ಲ. ರಾಜಕೀಯದಲ್ಲಿ ಯಾವಾಗ ಯಾವ ಪಟ್ಟುಗಳನ್ನು ಹಾಕ್ಬೇಕು, ಯಾವ ಪಟ್ಟು ಹಾಕಿದ್ರೆ, ಎದುರಾಳಿಯನ್ನು ಮಟ್ಟ ಹಾಕ್ಬಹ್ದು ಅನ್ನೋದನ್ನು ಅರೆದು ಕುಡಿದಿರೋ ಹಳೇ ಪೈಲ್ವಾನ್ ಸಿದ್ದರಾಮಯ್ಯ. ಅಷ್ಟಿಲ್ದೇ ಹೋಗಿದ್ರೆ, ಜೆಡಿಎಸ್‌ನಿಂದ ಬಂದು, ಕಾಂಗ್ರಸ್‌ನ (Congress)ಘಟಾನುಘಟಿಗಳನ್ನೇ ಮೀರಿಸಿ, ಎರಡು ಬಾರಿ ಮುಖ್ಯಮಂತ್ರಿಯಾಗೋದಕ್ಕೆ ಸಾಧ್ಯವಾಗ್ತಿಲ್ಲ. ಸಿಎಂ ಕುರ್ಚಿ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ. ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿಗಳು ವಕಾಲತ್ತು ವಹಿಸುತ್ತಿದ್ದಾರೆ. ಇದ್ರ ಮಧ್ಯೆ ಅಧಿಕಾರ ಹಂಚಿಕೆಯ ಸೂತ್ರವೂ ಸದ್ದು ಮಾಡ್ತಾ ಇದೆ. ಎರಡೂವರೆ ವರ್ಷಗಳ ನಂತ್ರ ಅಧಿಕಾರ ಬಿಟ್ಟುಕೊಡಬೇಕಾದ ಪರಿಸ್ಥಿತಿ ಎದುರಾಗಲಿದೆ ಅನ್ನೋ ಮಾತುಗಳೂ ಕೇಳಿ ಬರ್ತಾ ಇವೆ.

ಇದನ್ನೂ ವೀಕ್ಷಿಸಿ:  'ಫಾರೆಸ್ಟ್'ನಲ್ಲಿ ಓಡೋ ಓಡೋ‌‌ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more