ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

Published : Jul 13, 2024, 12:43 PM IST

ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ ಎಐಸಿಸಿ ಸತ್ಯಶೋಧನಾ ಸಮಿತಿ
ಸತ್ಯಶೋಧನಾ ಸಮಿತಿ ಸಭೆಯ ವೇಳೆ ದೂರು-ದುಮ್ಮಾನಕ್ಕೆ ಹೆಚ್ಚಿನ ಆದ್ಯತೆ
ಸೋಲಿನ ಕಾರಣವನ್ನು ಇತರರ ಹೆಗಲಿಗೆ ಹಾಕಲು ಮುಂದಾದ ನಾಯಕರು
 

ಲೋಕಸಭಾ ಚುನಾವಣೆ (Lok Sabha election) ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದು, ಸೋಲಿನ ಬಗ್ಗೆ ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ (AICC fact finding committee) ನಡೆಸಿದೆ. ಅಲ್ಲದೇ ಚುನಾವಣಾ ಸೋಲಿಗೆ ಇತರರ ಕಡೆಗೆ ಬೊಟ್ಟು ಮಾಡೋದು ಬಿಡಿ, ಸೋಲಿಗೆ ನಿಮ್ಮ ಪಾಲೆಷ್ಟು ಅನ್ನೋದನ್ನು ವಿಮರ್ಶೆ ಮಾಡಿಕೊಳ್ಳಿ ಎಂದಿದೆ. ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ ಬೀಸಿದ್ದು, ಕಾಂಗ್ರೆಸ್ (Congress)ಸತ್ಯಶೋಧನಾ ಸಮಿತಿಯಿಂದ ಪಕ್ಷ ವಿರೋಧಿಗಳಿಗೆ ತಿರುಗೇಟು ನೀಡಲಾಗಿದೆ. ಇನ್ನೂ ಶಿವಮೊಗ್ಗದಲ್ಲಿ ಸೋಲಲು ಕಾರಣ ಕೊಟ್ಟ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಲೀಡ್ ಕಡಿಮೆಯಾಗಿದ್ದೇ ಕಾರಣ ಎಂದಿದ್ದಾರೆ. ಭದ್ರಾವತಿ ಶಾಸಕರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮಧು ಬಂಗಾರಪ್ಪ(Madhu Bangarappa) ಮಾಡಿದ್ದಾರೆ. ಮಧು ಬಂಗಾರಪ್ಪ ವಿವರಣೆಗೆ ಮಧುಸೂಧನ್ ಮಿಸ್ತ್ರಿ ಅಸಮಾಧಾನ ಹೊರಹಾಕಿದ್ದಾರೆ. ಚುನಾವಣಾ ಹಿನ್ನಡೆಗೆ ನಿಮ್ಮ ಪಾತ್ರ ಎಷ್ಟು ಅಂತ ಸಮಿತಿ ಪ್ರಶ್ನಿಸಿದೆ. ಸಮಿತಿ ಸದಸ್ಯರ ವಿವರಗಳಿಂದ ಸಚಿವ ಮಧು ಬಂಗಾರಪ್ಪ ಕಂಗಾಲಾಗಿದ್ದಾರೆ. ಬೆಳಗಾವಿ ಕ್ಷೇತ್ರದ ಸೋಲಿನ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಿಂದ(Lakshmi Hebbalkar) ವಿವರಣೆ ಪಡೆಯಲಾಗಿದೆ. ಕೋಲಾರ ಕ್ಷೇತ್ರದ ಸೋಲಿನ ಕುರಿತು 100 ಪುಟಗಳ ವರದಿಯನ್ನು ನಾಯಕರು ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more