ಡಿಕೆ ಸಹೋದರರಿಗೆ ಕಾದಿದ್ಯಾ "ಕಮಲದಳ" ಮೈತ್ರಿ ತೂಫಾನ್ ಶಾಕ್..?

ಡಿಕೆ ಸಹೋದರರಿಗೆ ಕಾದಿದ್ಯಾ "ಕಮಲದಳ" ಮೈತ್ರಿ ತೂಫಾನ್ ಶಾಕ್..?

Published : Sep 12, 2023, 02:23 PM IST

ಮಂಡ್ಯ ರಣಕ್ಷೇತ್ರ..ರಾಮನಗರ ಕುರುಕ್ಷೇತ್ರ..ದೋಸ್ತಿ-ಕುಸ್ತಿ..!
ಬೇಟೆಗಾರ ಬಿಜೆಪಿ..ಟಾರ್ಗೆಟ್ ಡಿಕೆ..!ಸುಮಲತಾ ಕಥೆ ಏನು..?
“ಕಮಲದಳ” ಮೈತ್ರಿಗೆ ಉರುಳುತ್ತಾ ಕಾಂಗ್ರೆಸ್‌ ಭದ್ರಕೋಟೆ..?

ರಾಜಕಾರಣ ಅಂದ್ರೇನೇ ಹಾಗೆ.. ಅದೊಂಥರಾ ರಹಸ್ಯಗಳ ಕೋಟೆ. ಅಲ್ಲಿ ಯಾವಾಗ ಏನಾಗುತ್ತೋ, ಯಾರು ಯಾರ ಜೊತೆ ಕೈ ಜೋಡಿಸ್ತಾರೋ ಅನ್ನೋದೇ ಗೊತ್ತಾಗಲ್ಲ. ಇಲ್ಲಿ ಆಜನ್ಮ ವೈರಿಗಳು ಒಂದಾಗ್ತಾರೆ, ಒಂದಾಗಿದ್ದವರು ಆಜನ್ಮ ಶತ್ರುಗಳಾಗ್ತಾರೆ. ಅದೇ ರಾಜಕೀಯ. ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್‌ನನ್ನು(Congress) ಬಗ್ಗು ಬಡಿಯಲು ಬಿಜೆಪಿ(BJP) ಮತ್ತು ಜೆಡಿಎಸ್ (JDS) ಒಂದಾಗೋ ಲಕ್ಷಣ ಕಾಣಿಸ್ತಾ ಇದೆ. ಕೂಡಿ ಕಳೆಯೋ ಆಟದಲ್ಲೀಗ ನಿಜವಾದ ಸವಾಲು ಎದುರಾಗಿರೋದು ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವ್ರಿಗೆ. ಡಿಕೆಶಿ ಅವ್ರನ್ನು ರಾಜ್ಯ ರಾಜಕಾರಣದಲ್ಲಿ ರಣಬೇಟೆಗಾರ ಅಂತ ಕರೀತಾರೆ. ಅದನ್ನು ಡಿಕೆ ಸಾಹೇಬ ಕಳೆದ ವಿಧಾನಸಭಾ ಚುನಾವಣೆಯಲ್ಲಿ(Assembly election) ಪ್ರೂವ್ ಮಾಡಿ ಬಿಟ್ಟಿದ್ದಾರೆ. ಆದ್ರೀಗ ಇಂಥಾ ಬೇಟೆಗಾರನನ್ನೇ ಬೇಟೆಯಾಡೋ ರಣಬೇಟೆಗಾರನ ರೂಪದಲ್ಲಿ ನುಗ್ಗಿ ಬಂದಿದೆ ಮೈತ್ರಿ ತೂಫಾನ್. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡ್ಕೊಂಡು  ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲಿವೆಯಂತೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನನ್ನು ಮಕಾಡೆ ಮಲಗಿಸಿ ಬಿಟ್ಟಿರೋ ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಲೋಕಸಭಾ ಚುನಾವಣೆ. ಈಗಾಗ್ಲೇ ಮಿಷನ್ 20 ಗುರಿಯೊಂದಿಗೆ ಲೋಕಯುದ್ಧಕ್ಕೆ ಬಂಡೆ ತಾಲೀಮು ಶುರುವಾಗಿದೆ. ಅದ್ರಲ್ಲೂ ಮುಖ್ಯವಾಗಿ ಡಿಕೆಶಿಯವ್ರು ಟಾರ್ಗೆಟ್ ಮಾಡಿರೋದು ಎರಡು ಅಖಾಡಗಳನ್ನ. ಒಂದು ಮಂಡ್ಯ, ಮತ್ತೊಂದು ಬೆಂಗಳೂರು ಗ್ರಾಮಾಂತರ. ಕಳೆದ ಚುನಾವಣೆಯಂದೀಚೆಗೆ ಕಾಂಗ್ರೆಸ್ ಭದ್ರಕೋಟೆಯಾಗಿ ಬದಲಾಗಿರೋ ಈ ಎರಡೂ ಕ್ಷೇತ್ರಗಳನ್ನು ಕೈವಶ ಮಾಡಿಕೊಳ್ಳಲು ಡಿಕೆಶಿ ಪ್ಲ್ಯಾನ್‌ ಮಾಡ್ತಿದ್ದಾರೆ. ಈ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವ್ರೇ ಹಾಲಿ ಸಂಸದ. ಇದ್ರ ಜೊತೆಗೆ ಮಂಡ್ಯವನ್ನೂ ಗೆದ್ದು ಒಕ್ಕಲಿಗರ ಕೋಟೆಯಲ್ಲಿ ಪ್ರಭಾವಿ ಹೆಚ್ಚಿಸಿಕೊಳ್ಳೋದು ಡಿಕೆ ಶಿವಕುಮಾರ್ ಅವರ ಮೆಗಾ ಪ್ಲಾನ್. 

ಇದನ್ನೂ ವೀಕ್ಷಿಸಿ:  ಒಂದು ದಿನದ ಸಮಸ್ಯೆ ಅಲ್ಲ, ಇವರದ್ದು ನಿತ್ಯ ನರಕ: 6 ವರ್ಷವಾದ್ರೂ ಉದ್ಘಾಟನೆಯಾಗದ ಶೌಚಾಲಯ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more