ಡಿಕೆ ಸಹೋದರರಿಗೆ ಕಾದಿದ್ಯಾ "ಕಮಲದಳ" ಮೈತ್ರಿ ತೂಫಾನ್ ಶಾಕ್..?

ಡಿಕೆ ಸಹೋದರರಿಗೆ ಕಾದಿದ್ಯಾ "ಕಮಲದಳ" ಮೈತ್ರಿ ತೂಫಾನ್ ಶಾಕ್..?

Published : Sep 12, 2023, 02:23 PM IST

ಮಂಡ್ಯ ರಣಕ್ಷೇತ್ರ..ರಾಮನಗರ ಕುರುಕ್ಷೇತ್ರ..ದೋಸ್ತಿ-ಕುಸ್ತಿ..!
ಬೇಟೆಗಾರ ಬಿಜೆಪಿ..ಟಾರ್ಗೆಟ್ ಡಿಕೆ..!ಸುಮಲತಾ ಕಥೆ ಏನು..?
“ಕಮಲದಳ” ಮೈತ್ರಿಗೆ ಉರುಳುತ್ತಾ ಕಾಂಗ್ರೆಸ್‌ ಭದ್ರಕೋಟೆ..?

ರಾಜಕಾರಣ ಅಂದ್ರೇನೇ ಹಾಗೆ.. ಅದೊಂಥರಾ ರಹಸ್ಯಗಳ ಕೋಟೆ. ಅಲ್ಲಿ ಯಾವಾಗ ಏನಾಗುತ್ತೋ, ಯಾರು ಯಾರ ಜೊತೆ ಕೈ ಜೋಡಿಸ್ತಾರೋ ಅನ್ನೋದೇ ಗೊತ್ತಾಗಲ್ಲ. ಇಲ್ಲಿ ಆಜನ್ಮ ವೈರಿಗಳು ಒಂದಾಗ್ತಾರೆ, ಒಂದಾಗಿದ್ದವರು ಆಜನ್ಮ ಶತ್ರುಗಳಾಗ್ತಾರೆ. ಅದೇ ರಾಜಕೀಯ. ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್‌ನನ್ನು(Congress) ಬಗ್ಗು ಬಡಿಯಲು ಬಿಜೆಪಿ(BJP) ಮತ್ತು ಜೆಡಿಎಸ್ (JDS) ಒಂದಾಗೋ ಲಕ್ಷಣ ಕಾಣಿಸ್ತಾ ಇದೆ. ಕೂಡಿ ಕಳೆಯೋ ಆಟದಲ್ಲೀಗ ನಿಜವಾದ ಸವಾಲು ಎದುರಾಗಿರೋದು ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವ್ರಿಗೆ. ಡಿಕೆಶಿ ಅವ್ರನ್ನು ರಾಜ್ಯ ರಾಜಕಾರಣದಲ್ಲಿ ರಣಬೇಟೆಗಾರ ಅಂತ ಕರೀತಾರೆ. ಅದನ್ನು ಡಿಕೆ ಸಾಹೇಬ ಕಳೆದ ವಿಧಾನಸಭಾ ಚುನಾವಣೆಯಲ್ಲಿ(Assembly election) ಪ್ರೂವ್ ಮಾಡಿ ಬಿಟ್ಟಿದ್ದಾರೆ. ಆದ್ರೀಗ ಇಂಥಾ ಬೇಟೆಗಾರನನ್ನೇ ಬೇಟೆಯಾಡೋ ರಣಬೇಟೆಗಾರನ ರೂಪದಲ್ಲಿ ನುಗ್ಗಿ ಬಂದಿದೆ ಮೈತ್ರಿ ತೂಫಾನ್. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡ್ಕೊಂಡು  ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲಿವೆಯಂತೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನನ್ನು ಮಕಾಡೆ ಮಲಗಿಸಿ ಬಿಟ್ಟಿರೋ ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಲೋಕಸಭಾ ಚುನಾವಣೆ. ಈಗಾಗ್ಲೇ ಮಿಷನ್ 20 ಗುರಿಯೊಂದಿಗೆ ಲೋಕಯುದ್ಧಕ್ಕೆ ಬಂಡೆ ತಾಲೀಮು ಶುರುವಾಗಿದೆ. ಅದ್ರಲ್ಲೂ ಮುಖ್ಯವಾಗಿ ಡಿಕೆಶಿಯವ್ರು ಟಾರ್ಗೆಟ್ ಮಾಡಿರೋದು ಎರಡು ಅಖಾಡಗಳನ್ನ. ಒಂದು ಮಂಡ್ಯ, ಮತ್ತೊಂದು ಬೆಂಗಳೂರು ಗ್ರಾಮಾಂತರ. ಕಳೆದ ಚುನಾವಣೆಯಂದೀಚೆಗೆ ಕಾಂಗ್ರೆಸ್ ಭದ್ರಕೋಟೆಯಾಗಿ ಬದಲಾಗಿರೋ ಈ ಎರಡೂ ಕ್ಷೇತ್ರಗಳನ್ನು ಕೈವಶ ಮಾಡಿಕೊಳ್ಳಲು ಡಿಕೆಶಿ ಪ್ಲ್ಯಾನ್‌ ಮಾಡ್ತಿದ್ದಾರೆ. ಈ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವ್ರೇ ಹಾಲಿ ಸಂಸದ. ಇದ್ರ ಜೊತೆಗೆ ಮಂಡ್ಯವನ್ನೂ ಗೆದ್ದು ಒಕ್ಕಲಿಗರ ಕೋಟೆಯಲ್ಲಿ ಪ್ರಭಾವಿ ಹೆಚ್ಚಿಸಿಕೊಳ್ಳೋದು ಡಿಕೆ ಶಿವಕುಮಾರ್ ಅವರ ಮೆಗಾ ಪ್ಲಾನ್. 

ಇದನ್ನೂ ವೀಕ್ಷಿಸಿ:  ಒಂದು ದಿನದ ಸಮಸ್ಯೆ ಅಲ್ಲ, ಇವರದ್ದು ನಿತ್ಯ ನರಕ: 6 ವರ್ಷವಾದ್ರೂ ಉದ್ಘಾಟನೆಯಾಗದ ಶೌಚಾಲಯ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more