Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Published : Feb 12, 2024, 06:30 PM ISTUpdated : Feb 12, 2024, 06:31 PM IST

ಸುತ್ತೂರು ತಪೋಭೂಮಿಯಲ್ಲಿ ಗೃಹ ಮಂತ್ರಿ..!
ರಾಜಕೀಯ ಸಂಚಲನ ಸೃಷ್ಟಿಸಿದ ಅಮಿತ್ ಶಾ..!
ಅಮಿತ್ ಶಾ ಭೇಟಿಯಿಂದ ಬಿಜೆಪಿಯಲ್ಲಿ ರಣೋತ್ಸಾಹ

ಅಮಿತ್ ಶಾ ಕರ್ನಾಟಕಕ್ಕೆ ಬಂದಿದ್ದಾರೆ. ಮೈಸೂರಿನಲ್ಲಿ(Mysore) ಟೆಂಪಲ್ ರನ್ ಮಾಡ್ತಾ ಇರೋ ಕೇಂದ್ರ ಗೃಹ ಮಂತ್ರಿ , ಲೋಕಸಭಾ ಚುನಾವಣೆಯ ರಣಕಾವನ್ನು ಹೆಚ್ಚಿಸಿದ್ದಾರೆ. ಬಿಜೆಪಿ(BJP) ಪಾಳಯದಲ್ಲಿ ಹೊಸ ಉತ್ಸಾಹ ಶುರುವಾಗಿದೆ. ಇನ್ನೊಂದು ಕಡೆ ಸಿದ್ದು ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಭೇಟಿಯಿಂದ ಆಗಬಲ್ಲ ರಾಜಕೀಯ ಏರುಪೇರಿನ ಚರ್ಚೆಯೂ ಆಗ್ತಾ ಇದೆ. ಲೋಕಸಭಾ(Loksabha)ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗ್ತಾ ಇದೆ. ರಾಷ್ಟ್ರಾದ್ಯಂತ ಗೆಲುವು ಸೋಲಿನ ಲೆಕ್ಕಾಚಾರವೇ ಟ್ರೆಂಡಿಂಗ್ ಟಾಪಿಕ್.ರಾಜ್ಯದಲ್ಲೂ ಕೂಡ ಕಾಂಗ್ರೆಸ್ (Congress)ಅಧಿಕಾರದಲ್ಲಿ ಇರೋದ್ರಿಂದ ಲೋಕಸಭೆಯಲ್ಲಿ ಉತ್ತಮ ಪ್ರದರ್ಶನ ನೀಡೋಕೆ ಸಮರ ತಾಲೀಮು ನಡೆಸ್ತಾನೆ ಇದೆ. ಇನ್ನು ಬಿಜೆಪಿ ಪಕ್ಷವಂತೂ ಮೋದಿ ಜಪದ ಮೂಲಕವೇ ಚುನಾವಣೆಯನ್ನ ಎದುರಿಸೋಕೆ ಸಜ್ಜಾಗಿದೆ. ಈ ಮಧ್ಯೆ ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಅನೇಕ ರಾಜಕೀಯ ಲೆಕ್ಕಾಚಾರಗಳನ್ನ ಬದಲು ಮಾಡಿತಾ ಅನ್ನೋ ಅನುಮಾನ ಹುಟ್ಟಿಸಿದೆ. ಮೈಸೂರಿನಲ್ಲಿ ದೇವಸ್ಥಾನ ಹಾಗೂ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ಕೊಟ್ಟರು. ಜಗಜ್ಯೋತಿ ಬಸವಣ್ಣನ ಗುಣಗಾನ ಮಾಡಿದರು.

ಇದನ್ನೂ ವೀಕ್ಷಿಸಿ:  Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more