ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Sep 4, 2021, 3:47 PM IST

ಬೆಂಗಳೂರು, (ಸೆ.04): ಬಿಜೆಪಿಯ ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ನಡೆಯುತ್ತೆ ಅನ್ನೋ ಗೊಂದಲಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರೆ ಎಳೆದಿದ್ದಾರೆ.

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

ಅಮಿತ್ ಶಾ ಹೇಳಿದಂತೆ  ಮುಂದಿನ 2023ರ ಎಲೆಕ್ಷನ್​​ನಲ್ಲಿ ಬಿಜೆಪಿ ಎಲೆಕ್ಷನ್​​​ ರಥಕ್ಕೆ ಬೊಮ್ಮಾಯಿ ಸಾರಥಿ ಆಗಲಿದ್ದಾರೆ. ಇದು ಇನ್ನುಳಿದ ಕೆಲ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ದಿಢೀರ್ ಅಂಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿ ಭಾರೀ ಸಂಚಲನ ಮೂಡಿಸಿದೆ.