ಸಿದ್ದು ವಿರುದ್ಧ ಗುಡುಗಿದ ಅನಂತ್ ಕುಮಾರ್ ಹೆಗಡೆ: 7ನೇ ಬಾರಿ ಸಂಸತ್ತು ಪ್ರವೇಶಿಸ್ತಾರಾ ಹಿಂದೂ ಹುಲಿ..?

ಸಿದ್ದು ವಿರುದ್ಧ ಗುಡುಗಿದ ಅನಂತ್ ಕುಮಾರ್ ಹೆಗಡೆ: 7ನೇ ಬಾರಿ ಸಂಸತ್ತು ಪ್ರವೇಶಿಸ್ತಾರಾ ಹಿಂದೂ ಹುಲಿ..?

Published : Dec 26, 2023, 03:08 PM IST

ಹೈಕಮಾಂಡ್‌ನಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ..!
ಚುನಾವಣಾ ರಾಜಕೀಯದಿಂದ ದೂರವಾಗಿದ್ದ ಸಂಸದ..!
ತನ್ನ ಕ್ಷೇತ್ರದ ಮೋದಿ ಸಮಾವೇಶಕ್ಕೇ ಗೈರಾಗಿದ್ದ ಎಂಪಿ..!
 

ಲೋಕಸಭಾ ಚುನಾವಣೆ 2024ರಲ್ಲಿ ನಡೆಯಲಿದೆ. ಮುಹೂರ್ತವಿನ್ನೂ ಫಿಕ್ಸ್ ಆಗದೇ ಇದ್ರೂ ಕೂಡ ಯಾರು ತಮ್ಮ ತಮ್ಮ ಕ್ಷೇತ್ರದಿಂದ ಎಂಪಿ ಸ್ಥಾನಕ್ಕೆ ನಿಲ್ಲಬಹುದು ಅನ್ನೋ ಚರ್ಚೆಗಳು ಈಗಾಗಲೇ ಶುರುವಾಗಿದೆ. ಈ ಚರ್ಚೆ ಉತ್ತರಕನ್ನಡ(Uttara kannada) ಜಿಲ್ಲೆಗೂ ಹೊರತಾಗಿಲ್ಲ. ಅನೇಕ ಆಕಾಂಕ್ಷಿಗಳನ್ನ ಹೊಂದಿರೋ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಹಿಂದೂ ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆ(Ananth Kumar Hegde) ಹೆಸರೇ ಜೋರಾಗಿ ಕೇಳ್ತಾ ಇದೆ. ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಯ ಗಲಾಟೆ ಜೋರಾಗಿದೆ. ಮೂರನೇ ಬಾರಿ ಪ್ರಧಾನಿಯಾಗೋಕೆ ಮೋದಿ ಕಿ ಗ್ಯಾರಂಟಿ ಅನ್ನೋ ಉದ್ಘೋಷದ ಮೂಲಕ ಪ್ರಧಾನಿ ನರೇಂದ್ರ ಮೋದಿ(Narendra Modi) ಅಖಾಡಕ್ಕೆ ಇಳಿದಿದ್ದಾರೆ. ಇನ್ನೊಂದು ಕಡೆಯಲ್ಲಿ ಮೋದಿಯ ರಾಜಕೀಯ ಶತ್ರುಗಳು ತಮ್ಮದೇ ಒಂದು ಮಹಾಮೈತ್ರಿಯನ್ನ ಮಾಡಿಕೊಂಡು ಅದಕ್ಕೆ ಐ ಎನ್ ಡಿ ಐ ಎ ಎಂಬ ಹೆಸರನ್ನ ಕೊಟ್ಕೊಂಡು ಮೋದಿಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಯುದ್ಧ ತಾಲೀಮು ನಡೆಸ್ತಾ ಇದಾರೆ. ವಿಧಾನಸಭಾ ಚುನಾವಣೆ ಮುಗೀತು, ಅದಾದ ಮೇಲೆ  ಪಂಚರಾಜ್ಯ ಎಲೆಕ್ಷನ್ ರಿಸಲ್ಟ್ ಬಂದಾಯ್ತು. ಈಗ ಶುರುವಾಗಿರೋದೇ 2024ರ ಲೋಕಸಭಾ ಚುನಾವಣೆಯ ಕುತೂಹಲಗಳು. ಮೋದಿ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ದೇಶದ ಜನ ಬದಲಾವಣೆ ಬಯಸಿ ಬೇರೆ ಪಕ್ಷದ ಬೇರೆ ನಾಯಕನಿಗೆ ಹುದ್ದೆ ನೀಡ್ತಾರಾ ಅನ್ನೋ ಚರ್ಚೆ ಕಾವೇರೋದಕ್ಕೂ ಮುನ್ನ ಹೊಸ ಮಾತು ಕತೆ ಶುರುವಾಗಿದೆ. ಅದೇ ನಮ್ಮ ಜಿಲ್ಲೆಯಿಂದ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಯಾರಾಗಬಹುದು ಅನ್ನೋದು. ಇದು ಎಲ್ಲಾ ಕಡೆಗಳಲ್ಲಿ ಕಂಡು ಬರ್ತಾ ಇರೋ ಕಾಮನ್ ಡಿಬೇಟ್.  ಅವರು ಆಗಬಬಹುದು, ಇವರು ಈ ಪಕ್ಷದಿಂದ ನಿಲ್ಲಬಹುದು ಹೀಗೇ ಜನರ ಮಾತುಕಥೆ ಶುರುವಾಗಿದೆ. ಇದರ ಮಧ್ಯ ಉತ್ತರ ಕನ್ನಡ ಜಿಲ್ಲೆಯಿಂದ ಬ್ರೇಕಿಂಗ್ ನ್ಯೂಸ್ ಬರ್ತಾ ಇದೆ. ಅದೇ ಆರು ಬಾರಿ ಸಂಸದರಾಗಿ ಆಯ್ಕೆ ಆಗಿರುವ, ಚುನಾವಣಾ ರಾಜಕೀಯದಲ್ಲಿ ಆಸಕ್ತಿ ಕಳೆದುಕೊಂಡಿರುವ, ಕಟ್ಟರ್ ಹಿಂದುತ್ವವಾದಿ, ಅನಂತ್ ಕುಮಾರ್ ಹೆಗಡೆ ಅವರು ಲೋಕಸಭೆಗೆ ನಿಲ್ತಾರಾ ಅನ್ನೋದು.

ಇದನ್ನೂ ವೀಕ್ಷಿಸಿ:  ಕಾಶ್ಮೀರದಲ್ಲಿ ಶುರವಾಗಿದೆಯಾ ಮುಸ್ಲಿಂ VS ಮುಸ್ಲಿಂ ಸಂಘರ್ಷ..? ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more