ವಿಜಯೇಂದ್ರ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ

Jul 2, 2021, 3:47 PM IST

ಬೆಂಗಳೂರು, (ಜುಲೈ.02): ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೂರಿನ ಅನ್ವಯ ತಮ್ಮ ಆಪ್ತ ಸಹಾಯಕ ರಾಜಣ್ಣ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.

ವಂಚನೆ ಆರೋಪದಲ್ಲಿ ಶ್ರೀರಾಮುಲು ಪಿಎ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯೇಂದ್ರ ಈ ವಿಚಾರವನ್ನು ನನ್ನ ಗಮನಕ್ಕೆ ತರಬಹುದಿತ್ತು ಎಂಬ ಅಸಮಾಧಾನವನ್ನು ಸಚಿವ ಶ್ರೀರಾಮುಲು ತಮ್ಮ ಆಪ್ತರ ಹತ್ತಿರ ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.