ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

Published : Jul 11, 2023, 10:36 PM ISTUpdated : Jul 11, 2023, 10:38 PM IST

ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ.  ಕರಾವಳಿಯಲ್ಲಿ ಬಂಡಾಯದ ಬೆಂಕಿ ಮುಂದುವರಿದಿದೆ.

ಪುತ್ತೂರು (ಜು.11): ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ. ಅವರು ಕಟ್ಟಿದ ಪುತ್ತಿಲ ಪರಿವಾರ ಸಂಘಟನೆ ಪುತ್ತೂರಿನ ಗ್ರಾ.ಪಂ ಉಪಚುನಾವಣೆ ಅಖಾಡಕ್ಕೆ ಧುಮುಕಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳು ಗ್ರಾ.ಪಂ ಚುನಾವಣೆ ಸ್ಪರ್ಧೆಗೆ ಇಳಿದಿದ್ದಾರೆ. ನಿಡ್ಪಳ್ಳಿ ಗ್ರಾ.ಪಂ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ‌ ಜಗನ್ನಾಥ್ ರೈ  ಹಾಗೂ ಆರ್ಯಾಪು ಗ್ರಾ.ಪಂ ಉಪಚುನಾವಣೆಗೆ  ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ನಾಮಿನೇಶನ್ ಸಲ್ಲಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದು ಪುತ್ತಿಲ ಪರಿವಾರ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈ ಮೂಲಕ ಪುತ್ತೂರಿನ ಹಳ್ಳಿ ಹಳ್ಳಿಗೂ  ಪುತ್ತಿಲ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಿರೋ ಸೂಚನೆ ಸಿಕ್ಕಿದೆ. ದ.ಕ ಲೋಕಸಭಾ ಸ್ಥಾನದ ಆಕಾಂಕ್ಷಿಯೂ ಆಗಿರೋ ಅರುಣ್ ಪುತ್ತಿಲ. ರಾಜ್ಯ ಬಿಜೆಪಿಯಲ್ಲಿ ಬಹುದೊಡ್ಡ ಸ್ಥಾನಮಾನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬಂಡಾಯ ಶಮನದ ಯತ್ನದ ಮಧ್ಯೆಯೇ ಮತ್ತೆ ಪುತ್ತಿಲ ಬಂಡಾಯ ಕಾಣುತ್ತಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more