ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

Published : Jul 11, 2023, 10:36 PM ISTUpdated : Jul 11, 2023, 10:38 PM IST

ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ.  ಕರಾವಳಿಯಲ್ಲಿ ಬಂಡಾಯದ ಬೆಂಕಿ ಮುಂದುವರಿದಿದೆ.

ಪುತ್ತೂರು (ಜು.11): ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ. ಅವರು ಕಟ್ಟಿದ ಪುತ್ತಿಲ ಪರಿವಾರ ಸಂಘಟನೆ ಪುತ್ತೂರಿನ ಗ್ರಾ.ಪಂ ಉಪಚುನಾವಣೆ ಅಖಾಡಕ್ಕೆ ಧುಮುಕಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳು ಗ್ರಾ.ಪಂ ಚುನಾವಣೆ ಸ್ಪರ್ಧೆಗೆ ಇಳಿದಿದ್ದಾರೆ. ನಿಡ್ಪಳ್ಳಿ ಗ್ರಾ.ಪಂ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ‌ ಜಗನ್ನಾಥ್ ರೈ  ಹಾಗೂ ಆರ್ಯಾಪು ಗ್ರಾ.ಪಂ ಉಪಚುನಾವಣೆಗೆ  ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ನಾಮಿನೇಶನ್ ಸಲ್ಲಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದು ಪುತ್ತಿಲ ಪರಿವಾರ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈ ಮೂಲಕ ಪುತ್ತೂರಿನ ಹಳ್ಳಿ ಹಳ್ಳಿಗೂ  ಪುತ್ತಿಲ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಿರೋ ಸೂಚನೆ ಸಿಕ್ಕಿದೆ. ದ.ಕ ಲೋಕಸಭಾ ಸ್ಥಾನದ ಆಕಾಂಕ್ಷಿಯೂ ಆಗಿರೋ ಅರುಣ್ ಪುತ್ತಿಲ. ರಾಜ್ಯ ಬಿಜೆಪಿಯಲ್ಲಿ ಬಹುದೊಡ್ಡ ಸ್ಥಾನಮಾನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬಂಡಾಯ ಶಮನದ ಯತ್ನದ ಮಧ್ಯೆಯೇ ಮತ್ತೆ ಪುತ್ತಿಲ ಬಂಡಾಯ ಕಾಣುತ್ತಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more