ನಾಯಕತ್ವ ಬದಲಾವಣೆ ಪ್ರಸ್ತಾವನೆಗೆ ಬಿಗ್‌ಟ್ವಿಸ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Jun 11, 2021, 6:40 PM IST

ಬೆಂಗಳೂರು (ಜೂ. 11): ರಾಜ್ಯ ರಾಜಕೀಯದಲ್ಲಿ ಬಹಳ ಸದ್ದು ಮಾಡಿದ್ದ ನಾಯಕತ್ವ ಬದಲಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವನೆಯೇ ಹೈಕಮಾಂಡ್‌ ಮುಂದಿಲ್ಲ. ಅದೆಲ್ಲ ಕೇವಲ ಊಹಾಪೋಹ ಎಂದು ಆಡಳಿತಾರೂಢ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ, ನಾಯಕತ್ವ ಗೊಂದಲಕ್ಕೆ ತೆರೆ ಎಳೆದ ಬಿಎಸ್‌ವೈ

ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದೂ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆವ ಯತ್ನ ಮಾಡಿದ್ದಾರೆ.