ರಾಮನಗರದಲ್ಲಿ ವೇದಿಕೆ ಮೇಲೆ  ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

Published : Feb 21, 2023, 06:08 PM IST

ಸಚಿವ ಅಶ್ವತ್ಥನಾರಾಯಣ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಆಗಿದೆ ಎಂದರು. ಈ ವೇಳೆ ಭಾಷಣ ಮಧ್ಯೆಯೇ ಅನಿತಾಕುಮಾಸ್ವಾಮಿ ಅವರು ಅವೆಲ್ಲವೂ ಕುಮಾರಸ್ವಾಮಿ ಕಾಲದಲ್ಲಿಯೇ ಆಗಿತ್ತು ಎಂದರು.

ರಾಮನಗರ (ಫೆ.21): ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದರು. ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆಗಿದ್ದು, ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಹೇಳಿದ್ದಾರೆ.

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ನೂತನ ತಾಲೂಕು ನಿರ್ಮಾಣ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಭಾರತ್ ಮಾತಾಕಿ ಘೋಷಣೆ ‌ಕೂಗಿದ ಸಚಿವ ಅಶ್ವತ್ಥನಾರಾಯಣ ಅವರು, ತಾಲೂಕು ರಚನೆಗೆ ಬಿಜೆಪಿಯಿಂದ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದು ಹೇಳಿದರು. ಈ ವೇಳೆ ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆದರು. ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಅನಿತಾಕುಮಾಸ್ವಾಮಿ ಹೇಳಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಅವರು, ಆಯ್ತು ಮೇಡಂ ನೀವು ಭಾಷಣದಲ್ಲಿಯೇ ಮಾತನಾಡಿ ಎಂದು ಹೇಳಿದರು. ಈ ವೇಳೆ ಭಾಷಣದುದ್ದಕ್ಕೂ ಬಿಜೆಪಿ ಸರ್ಕಾರ ಹೊಗಳಿಕೆ ಮಾಡುತ್ತಿದ್ದ ಸಚಿವರಿಗೆ ಕಸಿವಿಸಿ ಉಂಟಾಯಿತು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more