Assembly election: ಬಿಜೆಪಿ ಟಿಕೆಟ್‌ ಹಂಚಿಕೆ: ಮತ್ತೊಂದು ಬಾಂಬ್‌ ಸಿಡಿಸಿದ ಡಿ.ವಿ. ಸದಾನಂದ ಗೌಡ!

Assembly election: ಬಿಜೆಪಿ ಟಿಕೆಟ್‌ ಹಂಚಿಕೆ: ಮತ್ತೊಂದು ಬಾಂಬ್‌ ಸಿಡಿಸಿದ ಡಿ.ವಿ. ಸದಾನಂದ ಗೌಡ!

Published : Mar 08, 2023, 05:45 PM IST

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬೇರೆ ರೀತಿಯಲ್ಲೇ ನಡೆಯುತ್ತಿದೆ. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಬೇರೆ ಹೆಸರು ಬರಬಹುದು ಎಂದು ಸದಾನಂದಗೌಡ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು (ಮಾ.08): ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯನ್ನು ಬೇರೆ ರೀತಿಯಲ್ಲೇ ಮಾಡ್ತಾ ಇದ್ದಾರೆ. ಜನ ಸೇರಿಸಾದಕ್ಷಣ ಟಿಕೇಟ್ ನೀಡೋದಿಲ್ಲ. ಈಗಾಗಲೇ ಎರಡು ಸರ್ವೆ ಕಾರ್ಯ ಆಗಿದೆ. ಮೂರನೇ ಸರ್ವೆ ಕಾರ್ಯ ನಡೆಯುತ್ತಿದ್ದು ಇದರಲ್ಲಿ ನಾನೂ ಕೋರ್ ಕಮಿಟಿ ಸದಸ್ಯನಾಗಿದ್ದೇನೆ. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಸರ್ವೆ ವರದಿಯಲ್ಲಿ ಬೇರೆಯವರ ಹೆಸರು ಬರಬಹುದು ಎಂದು ಸಂಸದ ಸದಾನಂದಗೌಡ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಈಗಾಗಲೇ ಹೈಕಮಾಂಡ್‌ ನಮಗೆ ಯಡಿಯೂರಪ್ಪಗೆ ಸೂಚನೆ ನೀಡಿದೆ. ಯಾವ ಅಭ್ಯರ್ಥಿಯ ಹೆಸರು ಹೇಳುವಂತಿಲ್ಲ. ಸರ್ವೆಯಲ್ಲಿ ಬರುವ ಹೆಸರಿಗೆ ಟಿಕೆಟ್ ನೀಡುವುದಾಗಿ ಹೈಕಮಾಂಡ್ ಹೇಳಿದೆ. ಹೀಗಾಗಿ ನಾವಿಲ್ಲಿ ಬಯಲಾಟ ಮಾಡಿ ಯಾರದ್ದೋ ಹೆಸರು ಹೇಳಿ ಘೋಷಣೆ ಮಾಡಿದ್ರೆ ನಡೆಯಲ್ಲ. ಸರ್ವೆ ವರದಿ ಫೈನಲ್. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಸರ್ವೆ ವರದಿಯಲ್ಲಿ ಬೇರೆಯವರ ಹೆಸರು ಬರಬಹುದು ಎಂದು ಹೇಳಿ ಬಿಜೆಪಿ ಶಾಸಕರು ಮತ್ತು ಟಿಕೆಟ್‌ ಆಕಾಂಕ್ಷಿಗಳ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದ್ದಾರೆ.

ಸರಿಯಾದ ಹೇಳಿಕೆ ನೀಡಿದ ಯಡಿಯೂರಪ್ಪ: ನಿನ್ನೆ ಯಡಿಯೂರಪ್ಪನವರು ಸರಿಯಾದ ಹೇಳಿಕೆ ಕೊಟ್ಟಿದ್ದಾರೆ. ಅಳೆದು ತೂಗಿ ಟಿಕೆಟ್‌ ಕೊಡ್ತಿದೀವಿ, ಗೆಲ್ಲೋರಿಗೆ ಸೀಟ್ ಕೊಡ್ತೀವಿ ಎಂದು ಯಡಿಯೂರಪ್ಪ ಹೇಳಿದಾರೆ. ನಮ್ಮ ಪಕ್ಷದಲ್ಲಿ ಇವರೇ ಅಭ್ಯರ್ಥಿ ಅಂತ ಹೇಳುವ ಸಂದರ್ಭ ಇಲ್ಲ. ಅಭ್ಯರ್ಥಿ ಯಾರು ಅಂತ ಸರ್ವೆಯಾಧರಿಸಿ ಹೈಕಮಾಂಡ್ ನಿರ್ಧರಿಸುತ್ತದೆ. ತಲೆಕೆಳಗಾಗಿ ನಡೆದರೂ, ಇಂತವರೇ ಅಭ್ಯರ್ಥಿ ಎಂದು ಹೇಳಲು ಆಗದು. ರಾಜ್ಯದಲ್ಲಿ ಬಿಜೆಪಿಗೆ ಯಾವತ್ತೂ ಬಹುಮತ ಬಂದಿಲ್ಲ.
ಹೆಚ್ಚು ಅಂದ್ರೆ 110 ಸೀಟ್ ಬಂದಿತ್ತು. ಕಳೆದ ಸಲ 104 ಸೀಟ್ ಗೆದ್ದಿದ್ದೆವು. ಈಗ ಮೋದಿಯವರ ಕಾರ್ಯಶೈಲಿ, ಸರ್ಕಾರದ ಉತ್ತಮ ಕಾರ್ಯಕ್ರಮಗಳಿಂದ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಅಂತ ದೇವರೇ ನಿಶ್ಚಯಿಸಿದ್ದಾನೆ ಎಂದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್