Assembly election: ಬಿಜೆಪಿ ಟಿಕೆಟ್‌ ಹಂಚಿಕೆ: ಮತ್ತೊಂದು ಬಾಂಬ್‌ ಸಿಡಿಸಿದ ಡಿ.ವಿ. ಸದಾನಂದ ಗೌಡ!

Assembly election: ಬಿಜೆಪಿ ಟಿಕೆಟ್‌ ಹಂಚಿಕೆ: ಮತ್ತೊಂದು ಬಾಂಬ್‌ ಸಿಡಿಸಿದ ಡಿ.ವಿ. ಸದಾನಂದ ಗೌಡ!

Published : Mar 08, 2023, 05:45 PM IST

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬೇರೆ ರೀತಿಯಲ್ಲೇ ನಡೆಯುತ್ತಿದೆ. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಬೇರೆ ಹೆಸರು ಬರಬಹುದು ಎಂದು ಸದಾನಂದಗೌಡ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು (ಮಾ.08): ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯನ್ನು ಬೇರೆ ರೀತಿಯಲ್ಲೇ ಮಾಡ್ತಾ ಇದ್ದಾರೆ. ಜನ ಸೇರಿಸಾದಕ್ಷಣ ಟಿಕೇಟ್ ನೀಡೋದಿಲ್ಲ. ಈಗಾಗಲೇ ಎರಡು ಸರ್ವೆ ಕಾರ್ಯ ಆಗಿದೆ. ಮೂರನೇ ಸರ್ವೆ ಕಾರ್ಯ ನಡೆಯುತ್ತಿದ್ದು ಇದರಲ್ಲಿ ನಾನೂ ಕೋರ್ ಕಮಿಟಿ ಸದಸ್ಯನಾಗಿದ್ದೇನೆ. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಸರ್ವೆ ವರದಿಯಲ್ಲಿ ಬೇರೆಯವರ ಹೆಸರು ಬರಬಹುದು ಎಂದು ಸಂಸದ ಸದಾನಂದಗೌಡ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಈಗಾಗಲೇ ಹೈಕಮಾಂಡ್‌ ನಮಗೆ ಯಡಿಯೂರಪ್ಪಗೆ ಸೂಚನೆ ನೀಡಿದೆ. ಯಾವ ಅಭ್ಯರ್ಥಿಯ ಹೆಸರು ಹೇಳುವಂತಿಲ್ಲ. ಸರ್ವೆಯಲ್ಲಿ ಬರುವ ಹೆಸರಿಗೆ ಟಿಕೆಟ್ ನೀಡುವುದಾಗಿ ಹೈಕಮಾಂಡ್ ಹೇಳಿದೆ. ಹೀಗಾಗಿ ನಾವಿಲ್ಲಿ ಬಯಲಾಟ ಮಾಡಿ ಯಾರದ್ದೋ ಹೆಸರು ಹೇಳಿ ಘೋಷಣೆ ಮಾಡಿದ್ರೆ ನಡೆಯಲ್ಲ. ಸರ್ವೆ ವರದಿ ಫೈನಲ್. ಜನ ಸೇರಿಸಿದಾಕ್ಷಣ ಅವರಿಗೆ ಟಿಕೆಟ್ ಎಂದು ಹೇಳೊಕೆ ಸಾಧ್ಯವಿಲ್ಲ. ಆಕಾಂಕ್ಷಿಗಳ ಹೊರತಾಗಿಯೂ ಸರ್ವೆ ವರದಿಯಲ್ಲಿ ಬೇರೆಯವರ ಹೆಸರು ಬರಬಹುದು ಎಂದು ಹೇಳಿ ಬಿಜೆಪಿ ಶಾಸಕರು ಮತ್ತು ಟಿಕೆಟ್‌ ಆಕಾಂಕ್ಷಿಗಳ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದ್ದಾರೆ.

ಸರಿಯಾದ ಹೇಳಿಕೆ ನೀಡಿದ ಯಡಿಯೂರಪ್ಪ: ನಿನ್ನೆ ಯಡಿಯೂರಪ್ಪನವರು ಸರಿಯಾದ ಹೇಳಿಕೆ ಕೊಟ್ಟಿದ್ದಾರೆ. ಅಳೆದು ತೂಗಿ ಟಿಕೆಟ್‌ ಕೊಡ್ತಿದೀವಿ, ಗೆಲ್ಲೋರಿಗೆ ಸೀಟ್ ಕೊಡ್ತೀವಿ ಎಂದು ಯಡಿಯೂರಪ್ಪ ಹೇಳಿದಾರೆ. ನಮ್ಮ ಪಕ್ಷದಲ್ಲಿ ಇವರೇ ಅಭ್ಯರ್ಥಿ ಅಂತ ಹೇಳುವ ಸಂದರ್ಭ ಇಲ್ಲ. ಅಭ್ಯರ್ಥಿ ಯಾರು ಅಂತ ಸರ್ವೆಯಾಧರಿಸಿ ಹೈಕಮಾಂಡ್ ನಿರ್ಧರಿಸುತ್ತದೆ. ತಲೆಕೆಳಗಾಗಿ ನಡೆದರೂ, ಇಂತವರೇ ಅಭ್ಯರ್ಥಿ ಎಂದು ಹೇಳಲು ಆಗದು. ರಾಜ್ಯದಲ್ಲಿ ಬಿಜೆಪಿಗೆ ಯಾವತ್ತೂ ಬಹುಮತ ಬಂದಿಲ್ಲ.
ಹೆಚ್ಚು ಅಂದ್ರೆ 110 ಸೀಟ್ ಬಂದಿತ್ತು. ಕಳೆದ ಸಲ 104 ಸೀಟ್ ಗೆದ್ದಿದ್ದೆವು. ಈಗ ಮೋದಿಯವರ ಕಾರ್ಯಶೈಲಿ, ಸರ್ಕಾರದ ಉತ್ತಮ ಕಾರ್ಯಕ್ರಮಗಳಿಂದ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಅಂತ ದೇವರೇ ನಿಶ್ಚಯಿಸಿದ್ದಾನೆ ಎಂದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್