Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Published : Mar 13, 2023, 06:25 PM IST

ಪಕ್ಷಾಂತರ ವಿಚಾರದ ಬಗ್ಗೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ. ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ. ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ. ಸೋಮಣ್ಣ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಕ್ಷಾಂತರ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ, ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ, ಇಲ್ಲವೆಂದರೆ ಇಲ್ಲ. ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್‌ ಕೇಳಿದ್ದೇನಾ.? ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ನನ್ನ ಸ್ನೇಹಿತರಾಗಿದ್ದು, ಅವರ ಕೆಲಸ ಅವರು ಮಾಡುತ್ತಾರೆ. ನನ್ನ ಕೆಲಸ ನಾನು ಮಾಡುತ್ತೇನೆ ಎಮದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿ. ಸೋಮಣ್ಣ ಅವರು ತಮ್ಮ ಮಗನಿಗೆ ರಾಜಾಜಿನಗರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಗೋವಿಂದರಾಜನಗರ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ. ಕೃಷ್ಣಪ್ಪ ಅವರು ಪ್ರಭಲರಾಗಿದ್ದು, ವಿಜಯನಗರದಲ್ಲಿ ಕೃಷ್ಣಪ್ಪ ಮತ್ತು ಗೋವಿಂದರಾಜನಗರದಲ್ಲಿ ಅವರ ಪುತ್ರ ಪ್ರಿಯಾಕೃಷ್ಣ ಅವರಿಗೆ ಕಾಂಗ್ರೆಸ್‌ನಿಂದ ಕ್ಷೇತ್ರ ಬಿಟ್ಟುಕೊಡಬೇಕಾಗಬಹುದು. ಈ ಹಿನ್ನೆಲೆಯಲ್ಲಿ ರಾಜಾಜಿನಗರದ ಕಾಂಗ್ರೆಸ್‌ ಟಿಕೆಟ್‌ ಅನ್ನು ಅರುಣ್‌ ಸೋಮಣ್ಣ ಅವರಿಗೆ ನೀಡಿದರೆ ತಾವು ಬೇರೊಂದು ಕ್ಷೇತ್ರಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more