Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ?

Published : Mar 13, 2023, 06:25 PM IST

ಪಕ್ಷಾಂತರ ವಿಚಾರದ ಬಗ್ಗೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ. ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ. ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ. ಸೋಮಣ್ಣ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಕ್ಷಾಂತರ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಕವಲುದಾರಿಗಳಿರುತ್ತವೆ, ನಾನೇನು ಸನ್ಯಾಸಿ ಅಲ್ಲ. ಬಿಜೆಪಿಯಿಂದ ಟಿಕೆಟ್‌ ಕೊಟ್ಟರೆ ನಿಂತ್ಕೋತೀನಿ, ಇಲ್ಲವೆಂದರೆ ಇಲ್ಲ. ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್‌ ಕೇಳಿದ್ದೇನಾ.? ಎಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ನನ್ನ ಸ್ನೇಹಿತರಾಗಿದ್ದು, ಅವರ ಕೆಲಸ ಅವರು ಮಾಡುತ್ತಾರೆ. ನನ್ನ ಕೆಲಸ ನಾನು ಮಾಡುತ್ತೇನೆ ಎಮದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿ. ಸೋಮಣ್ಣ ಅವರು ತಮ್ಮ ಮಗನಿಗೆ ರಾಜಾಜಿನಗರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಗೋವಿಂದರಾಜನಗರ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ. ಕೃಷ್ಣಪ್ಪ ಅವರು ಪ್ರಭಲರಾಗಿದ್ದು, ವಿಜಯನಗರದಲ್ಲಿ ಕೃಷ್ಣಪ್ಪ ಮತ್ತು ಗೋವಿಂದರಾಜನಗರದಲ್ಲಿ ಅವರ ಪುತ್ರ ಪ್ರಿಯಾಕೃಷ್ಣ ಅವರಿಗೆ ಕಾಂಗ್ರೆಸ್‌ನಿಂದ ಕ್ಷೇತ್ರ ಬಿಟ್ಟುಕೊಡಬೇಕಾಗಬಹುದು. ಈ ಹಿನ್ನೆಲೆಯಲ್ಲಿ ರಾಜಾಜಿನಗರದ ಕಾಂಗ್ರೆಸ್‌ ಟಿಕೆಟ್‌ ಅನ್ನು ಅರುಣ್‌ ಸೋಮಣ್ಣ ಅವರಿಗೆ ನೀಡಿದರೆ ತಾವು ಬೇರೊಂದು ಕ್ಷೇತ್ರಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more